
ಜೂ.25 ರಂದು ತುರ್ತುಪರಿಸ್ಥಿತಿಯ ಕರಾಳ ದಿನ: 50ನೇ ವರ್ಷಾರ್ಚರಣೆ
ಮಂಗಳೂರು: ಜೂ.25 ರಂದು ಮಂಗಳೂರಿನ ಕದ್ರಿ ಪಾರ್ಕ್ ಬಳಿಯಲ್ಲಿರುವ ಗೋರಕ್ಷನಾಥಾ ಸಭಾಭವನದಲ್ಲಿ ಬೆಳಗ್ಗೆ 10.30 ಗಂಟೆಗೆ ತುರ್ತುಪರಿಸ್ಥಿತಿಯ ಕರಾಳ ದಿನಾಚರಣೆಯ ಅಂಗವಾಗಿ ತುರ್ತು ಪರಿಸ್ಥಿತಿ ಬಗ್ಗೆ ಪ್ರದರ್ಶಿನಿ ಹಾಗೂ ತುರ್ತುಪರಿಸ್ಥಿತಿಯ 50ನೇ ವರ್ಷಾಚರಣೆ ಕಾರ್ಯಕ್ರಮವು ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಪ್ರಭಾರಿಗಳಾದ ಡಾ. ರಾಧಾ ಮೋಹನ್ದಾಸ್ ಅಗರ್ವಾಲ್ ಅವರು ನಡೆಸಲಿದ್ದು, ರಾಜ್ಯ ವಿಧಾನ ಪರಿಷತ್ ಸದಸ್ಯರಾದ, ತುರ್ತುಪರಿಸ್ಥಿತಿ ಕಾರ್ಯಕ್ರಮದ ರಾಜ್ಯ ಸಂಚಾಲಕರಾದ ಸಿ.ಟಿ. ರವಿ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ತುರ್ತುಪರಿಸ್ಥಿತಿಯ ಹೋರಾಟದಲ್ಲಿ ಭಾಗವಹಿಸಿ ಸೆರೆಮನೆ ವಾಸ ಅನುಭವಿಸಿದ ಹಿರಿಯರು, ನಗರದ ಪ್ರಮುಖ ಕಾರ್ಯಕರ್ತರು, ಯುವಕರು ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಮೊದಲು ಬೆಳಗ್ಗೆ 10.30ಕ್ಕೆ ಕದ್ರಿ ಪಾರ್ಕಿನಲ್ಲಿ ಡಾ. ರಾಧಾ ಮೋಹನ್ದಾಸ್ ಅಗರ್ವಾಲ್ ಅವರು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಉಳ್ಳಾಲದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರ ಮನೆಗೆ ಭೇಟಿ ನೀಡಿ, ಮಧ್ಯಾಹ್ನ 3 ಗಂಟೆಗೆ ಉಳ್ಳಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿಯಾದ ರಾಣಿ ಅಬ್ಬಕ್ಕರ 500 ವರ್ಷಾಚರಣೆಯ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.