
ಕಂಟೈನರ್ ಹಡಗು ಅಗ್ನಿ ದುರಂತ: 6 ಮಂದಿ ನಗರದ ಆಸ್ಪತ್ರೆಗೆ ದಾಖಲು
Tuesday, June 10, 2025
ಮಂಗಳೂರು: ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲು ದೂರದಲ್ಲಿ ಬೃಹತ್ ಕಂಟೈನರ್ ಹಡಗಿ(ಎಂವಿ ವಾನ್ ಹೈ 503)ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿರುವ ಹಡಗಿನ ಆರು ಮಂದಿ ಸಿಬ್ಬಂದಿಯನ್ನು ರಕ್ಷಿಸಿ ಮಂಗಳೂರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಿಸಲ್ಪಟ್ಟ ಉಳಿದ 12 ಮಂದಿಯನ್ನೂ ಮಂಗಳೂರಿಗೆ ಕರೆತರಲಾಗಿದೆ.
ರಕ್ಷಿಸಲ್ಪಟ್ಟ ಮತ್ತು ಗಾಯಗೊಂಡ ಸಿಬ್ಬಂದಿಯನ್ನು ಹೊತ್ತ ಐಎನ್ಎಸ್ ಸೂರತ್ ಸೋಮವಾರ ತಡರಾತ್ರಿ ಪಣಂಬೂರಿನ ಹೊಸ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ)ಕ್ಕೆ ಆಗಮಿಸಿದೆ. ಬಂದರಿನಿಂದ ಆರು ಮಂದಿ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 12 ಮಂದಿಗೆ ನಗರದ ಹೊಟೇಲ್ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಚೀನಾ ಮೂಲದ ಲೂ ಯಾನ್ಲಿ ಮತ್ತು ಇಂಡೋನೇಷ್ಯಾದ ಸೋನಿಟೂರ್ ಹೆನಿ ಎಂಬವರಿಗೆ ಗಂಭೀರ ಗಾಯಗಳಾಗಿದೆ. ಚೀನಾದ ಕ್ಸೂ ಪಬೋ, ಗೋ ಲೆನಿನೊ, ಮ್ಯಾನ್ಮರ್ ನ ಥೆನ್ ಥಾನ್ ತ್ವಾಯ್, ಕಿ ಝಾವ್ ತ್ವೂ ಎಂಬವರು ಗಾಯಗೊಂಡಿದ್ದಾರೆ. ಉಳಿದ 12 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.