ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರ ಬೆಲೆಯೇರಿಕೆ, ಭ್ರಷ್ಟಾಚಾರ, ಅಭಿವೃದ್ಧಿ ರಹಿತ ಆಡಳಿತದಿಂದ ಜನತೆ ಕಂಗೆಟ್ಟಿದ್ದಾರೆ: ಶಾಸಕ ಕಾಮತ್

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರ ಬೆಲೆಯೇರಿಕೆ, ಭ್ರಷ್ಟಾಚಾರ, ಅಭಿವೃದ್ಧಿ ರಹಿತ ಆಡಳಿತದಿಂದ ಜನತೆ ಕಂಗೆಟ್ಟಿದ್ದಾರೆ: ಶಾಸಕ ಕಾಮತ್


ಮಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರ ಬೆಲೆಯೇರಿಕೆ, ಭ್ರಷ್ಟಾಚಾರ, ಅಭಿವೃದ್ಧಿ ರಹಿತ ಆಡಳಿತದಿಂದ ಜನತೆ ಕಂಗೆಟ್ಟಿದ್ದಾರೆ. ಜನನ ಮತ್ತು ಮರಣ ಪ್ರಮಾಣಪತ್ರದ ಶುಲ್ಕವನ್ನು 5ರೂ.ನಿಂದ 70 ರೂ.ಗೆ ಏರಿಸಿ ನಿಶ್ಚಿಂತವಾಗಿ ಸಾಯಲೂ ಬಿಡದ ದರೋಡೆಕೋರ, ದರಿದ್ರ ಸರಕಾರ ಇದಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಬಂದ ಪುಟ್ಟ.. ಹೋದ ಪುಟ್ಟ.. ಎಂಬಂತೆ ಬೆಳಗ್ಗೆ ಜಿಲ್ಲೆಗೆ ಆಗಮಿಸಿ ಸಂಜೆ ವೇಳೆ ವಾಪಸ್ ವಿಮಾನ ಏರಿ ತೆರಳುತ್ತಾರೆ ಎಂದು ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ ನಡೆಸಿದರು.

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಽ ನೀತಿಗಳನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.


ರಾಜ್ಯ ಸರಕಾರದಿಂದ ಆಗುತ್ತಿರುವ ತೊಂದರೆಗಳನ್ನು ಸಾರ್ವಜನಿಕರು ಜನಪ್ರತಿನಿಧಿಗಳ ಬಳಿ ಹೇಳುತ್ತಿದ್ದಾರೆ. ನೂರಾರು ಸಮಸ್ಯೆಗಳನ್ನು ಜನರು ನಮ್ಮ ಗಮನಕ್ಕೆ ತಂದಿದ್ದಾರೆ. ಈ ಪೈಕಿ 25 ನಿರ್ದಿಷ್ಟ ವಿಷಯಗಳನ್ನು ನಾವು ಪಟ್ಟಿಮಾಡಿದ್ದೇವೆ. ಬಿಜೆಪಿ ಅವಽ ಮುಗಿದ ಬಳಿಕ ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ರಾಜ್ಯ ಕಾಂಗ್ರೆಸ್ ಸರಕಾರದ ಕೈಯಲ್ಲಿದೆ. ಕಳೆದ ಮೂರು ತಿಂಗಳಿನಿಂದ ಮನಪಾದಲ್ಲಿ ಅಭಿವೃದ್ಧಿಗೆ ಸಂಬಂಽಸಿದ ಯಾವುದೇ ಸಭೆಯನ್ನು ಉಸ್ತುವಾರಿ ಸಚಿವರು ನಡೆಸಿಲ್ಲ. ಈಗ ನಗರದಲ್ಲಿ ಕೃತಕ ನೆರೆಗೆ ಬಿಜೆಪಿ ಕಾರಣ ಎಂದು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರಕಾರ ಯಾವುದೇ ಹೊಸ ರೇಶನ್ ಕಾರ್ಡ್‌ಗೆ ಅರ್ಜಿ ಸ್ವೀಕರಿಸುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಸಾವಿರ ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸರಕಾರ ಹೊರಟಿದೆ. ಆ ಮೂಲಕ ಪಡಿತರ ಅಕ್ಕಿ ನಿಲ್ಲಿಸಿ, ಹಣ ಉಳಿಸಲು ಸರಕಾರ ಮುಂದಾಗಿದೆ. ಸರಕಾರಕ್ಕೆ ಬಡವರ ಶಾಪ ತಟ್ಟದೇ ಬಿಡುವುದಿಲ್ಲ. ಮುಡಾ ಅಧ್ಯಕ್ಷರ ಅಧಿಕಾರ ಕಸಿದುಕೊಳ್ಳಲಾಗಿದೆ. ಮುಡಾಕ್ಕೆ ಸಲ್ಲಿಸಿದ ಅರ್ಜಿಗಳು ಬೆಂಗಳೂರಿನಲ್ಲಿ ಇತ್ಯರ್ಥವಾಗುತ್ತಿದೆ. ಕೃಷಿ ಭೂಮಿ ನೋಂದಣಿ ಆಗುತ್ತಿಲ್ಲ. ಬಡವರಿಗೆ ಹಕ್ಕುಪತ್ರ ನೀಡುತ್ತಿಲ್ಲ, ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಬರುತ್ತಿಲ್ಲ, ಆಶಾ ಕಾರ್ಯಕರ್ತರ ವೇತನ ಹೆಚ್ಚಳ ಮಾಡಿಲ್ಲ, ಯಾವುದೇ ಶಾಲಾ ಕೊಠಡಿ ನಿರ್ಮಾಣ ಆಗಿಲ್ಲ. ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಮನಪಾ ಆಯುಕ್ತರು ಕೋಟಿ ರೂ. ನೀಡಿ ಇಲ್ಲಿಗೆ ನೇಮಕವಾಗುತ್ತಿದ್ದಾರೆ. ಬಿಜೆಪಿ ಅವಽಯಲ್ಲಿ ಶಿಲಾನ್ಯಾಸ ನಡೆಸಿ, ಅನುದಾನ ಮೀಸಲಿಟ್ಟು ಪೂರ್ಣಗೊಂಡ ಕಾಮಗಾರಿಗಳು ಈಗ ಕಾಂಗ್ರೆಸ್‌ನವರು ಉದ್ಘಾಟಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಯಾವುದೇ ಕಾಮಗಾರಿಗೆ ಶಿಲಾನ್ಯಾಸ ನಡೆಸಿಲ್ಲ ಎಂದು ಆರೋಪಗಳ ಸುರಿಮಳೆಗೈದರು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರೇ ಹೇಳಿದ್ದಾರೆ. ಗ್ಯಾರಂಟಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಸರಕಾರ ಈಗ ಗ್ಯಾರಂಟಿ ಯೋಜನೆಗಳನ್ನು ಮರೆತಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಸಂಗ್ರಹಿಸಿದ ತೆರಿಗೆಗೆ ಅನುಗುಣವಾಗಿ ದ.ಕ. ಜಿಲ್ಲೆಗೆ, ಶಾಸಕರಿಗೆ ಅನುದಾನ ನೀಡಿಲ್ಲ. ಯಾವುದೇ ಯೋಜನೆಗೆ ಶಿಲಾನ್ಯಾಸ ಆಗುತ್ತಿಲ್ಲ. ಬಿಜೆಪಿ ಸರಕಾರ ನಡೆಸಿದ ಕಾಮಗಾರಿಗೆ ಉದ್ಘಾಟನೆ ಮಾತ್ರ ಆಗುತ್ತಿದೆ. ನರೇಗಾ ಯೋಜನೆಗೆ ಕೇಂದ್ರ ಸರಕಾರ ಅನುದಾನ ನೀಡಿದ್ದರೂ, ರಾಜ್ಯ ಸರಕಾರ ಹಣ ಬಿಡುಗಡೆ ಮಾಡುತ್ತಿಲ್ಲ. ಜಿಲ್ಲೆಯಲ್ಲಿ 43 ಸಾವಿರ ಸಂಧ್ಯಾ ಸುರಕ್ಷಾ ಯೋಜನೆ ರದ್ದು ಮಾಡಲು ನೋಟಿಸ್ ನೀಡಲಾಗಿದೆ. ಅಕ್ರಮ ಸಕ್ರಮ ಅರ್ಜಿ ಒಂದು ಲಕ್ಷಕ್ಕೂ ಮಿಕ್ಕಿ ವಿಲೇವಾರಿಗೆ ಬಾಕಿ ಇದೆ. ಜಿಲ್ಲೆಯಲ್ಲಿ 140ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಮರಳು, ಕೆಂಪುಕಲ್ಲು ಕೊರತೆ ಆಗಿದೆ. ಮುಡಾದಲ್ಲಿ ಕಾಂಗ್ರೆಸ್‌ನ ಬ್ರೋಕರ್‌ಗಳೇ ತುಂಬಿ ಹೋಗಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಸರಕಾರದಿಂದ ಬಡಜನರು ಕಂಗಾಲಾಗಿದ್ದಾರೆ ಎಂದು ಆಪಾದಿಸಿದರು.

ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮುಸಲ್ಮಾನರಿಗೆ ಸೀಮಿತವಾಗಿ ಕಾರ್ಯನಿರ್ವಹಿಸುತ್ತಿದೆ. ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಮೀಸಲಾತಿ ನೀಡಿದ ಬಳಿಕ ಇದೀಗ ಆಶ್ರಯ ಮನೆ ಹಂಚಿಕೆಯಲ್ಲೂ ಮುಸಲ್ಮಾನರಿಗೆ ಆದ್ಯತೆ ನೀಡಿದೆ. ಸರಕಾರವನ್ನು ಪ್ರಶ್ನೆ ಮಾಡಿದರೆ ಎಫ್ ಐಆರ್ ದಾಖಲಿಸಲಾಗುತ್ತಿದೆ. ಹಿಂದುಗಳ ವಿರುದ್ಧ ಎಫ್ ಐಆರ್, ಗಡಿಪಾರು, ರಾತ್ರಿ ವೇಳೆ ಮನೆಗೆ ತೆರಳಿ ಫೋಟೋ ತೆಗೆಯಲಾಗುತ್ತಿದೆ. ಹಿಂದುಗಳ ಧ್ವನಿ ಅಡಗಿಸಲಾಗುತ್ತಿದೆ ಎಂದರು.

ಬಿಜೆಪಿ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ, ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಮುಖರಾದ ವಕೀಲ ಸುಧಾಕರ ಜೋಶಿ, ನಿತಿನ್‌ಕುಮಾರ್, ರವಿಶಂಕರ ಮಿಜಾರ್, ರಾಜಗೋಪಾಲ ರೈ, ಮಾಜಿ ಮೇಯರ್‌ಗಳಾದ ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಪ್ರವೀಣ್‌ಕುಮಾರ್ ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article