
ರಥಬೀದಿ ಸರಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ಬಿಸಿಎ-ಬಿ.ಕಾಂ. ಪ್ರವೇಶಕ್ಕೆ ಅರ್ಜಿ ಅಹ್ವಾನ
ಮಂಗಳೂರು: ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು, ರಥಬೀದಿ, ಮಂಗಳೂರು ಇಲ್ಲಿ ಬಿಸಿಎ ಮತ್ತು ಬಿ.ಕಾಂ. ಪದವಿ ತರಗತಿಗಳಿಗೆ ಪ್ರವೇಶ ಲಭ್ಯವಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿರುವ ಈ ಕಾಲೇಜು ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸುಸಜ್ಜಿತ ಕಂಪ್ಯೂಟರ್ ಪ್ರಯೋಗಾಲಯ ಹಾಗೂ ಇತರ ಸೌಲಭ್ಯಗಳನ್ನು ಹೊಂದಿರುತ್ತದೆ.
ಬಿಸಿಎ ಪದವಿಯು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಐ) ಮಾನ್ಯತೆ ಪಡೆದಿರುತ್ತದೆ. ತರಗತಿಗಳು ಪ್ರತಿ ದಿನ ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯುತ್ತಿದೆ. ಸರಕಾರ ನಿಗದಿ ಪಡಿಸಿದ ಶುಲ್ಕದ ಹೊರತು ಇತರ ಯಾವುದೇ ಶುಲ್ಕಗಳು ಇರುವುದಿಲ್ಲ.
ಪದವಿ ಪೂರ್ವ ಶಿಕ್ಷಣದ ನಂತರ ಉದ್ಯೋಗ ನಿರತರಾಗಿರುವ ಮತ್ತು ಇತರ ಕಾರಣಗಳಿಂದ ಪದವಿ ಶಿಕ್ಷಣ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಪದವಿ ಪಡೆಯಲು ಇದು ಉತ್ತಮ ಅವಕಾಶವಾಗಿದೆ.
ಹೆಚ್ಚಿನ ಮಾಹಿತಿಗೆ ಹಾಗೂ 2025-25ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿಗೆ ಕಾಲೇಜಿನ ಕಚೇರಿಯನ್ನು ವೈಯಕ್ತಿಕವಾಗಿ ಅಥವಾ ದೂರವಾಣಿ ಸಂಖ್ಯೆ 0824-2494109 ಮೂಲಕ (ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ) ಸಂಪರ್ಕಿಸಬಹುದಾಗಿದೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.