ತಾಕತ್ ಇದ್ದರೆ ಪುತ್ತಿಲರನ್ನು ಗಡಿಪಾರು ಮಾಡಿ: ಯುವಕ ಪೊಲೀಸರಿಗೆ ಸವಾಲು

ತಾಕತ್ ಇದ್ದರೆ ಪುತ್ತಿಲರನ್ನು ಗಡಿಪಾರು ಮಾಡಿ: ಯುವಕ ಪೊಲೀಸರಿಗೆ ಸವಾಲು

ಮಂಗಳೂರು: ತಾಕತ್ ಇದ್ದರೆ ಅರುಣ್ ಕುಮಾರ್ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ, ಒಮ್ಮೆ ಪುತ್ತಿಲರ ವಿಷಯಕ್ಕೆ ಬನ್ನಿ ನೋಡೋಣ ಎಂದು ಯುವಕನೊಬ್ಬ ಸರಕಾರ ಹಾಗೂ ಪೊಲೀಸರಿಗೆ ಸವಾಲು ಹಾಕಿದ್ದಾನೆ. 

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಗಡಿಪಾರು ಕಾನೂನು ಪ್ರಕ್ರಿಯೆ ವಿಚಾರವಾಗಿ ಸೆಲ್ಫಿ ವೀಡಿಯೋ ಮಾಡಿ ಯುವಕ ಆಕ್ರೋಶ ಹೊರಹಾಕಿದ್ದಾನೆ. ಯಾವ ಕಾರಣಕ್ಕೆ ಗಡಿಪಾರು ಮಾಡುತ್ತಿದ್ದೀರಿ ಹೇಳಿ. ಹಿಂದೂ ಸಮಾಜ ಯಾವ ಅನ್ಯಾಯ ಮಾಡಿದೆ ಹೇಳಿ, ಆಮೇಲೆ ನೋಟಿಸ್ ಕೊಡಿ. ನಾವು ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಿಡಿಕಾರಿದ್ದಾನೆ. 

ಇನ್ನು ಮುಂದೆ ಕೂಡ 24 ಗಂಟೆಗಳ ಕಾಲ ಹಿಂದುತ್ವಕ್ಕೆ ದುಡಿಯುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳು ಸತ್ತಿದ್ದಾರಾ ಬದುಕಿದ್ದಾರಾ ನೋಡೋಣ. ನಿಮ್ಮ ತಾಕತ್ತನ್ನು ಒಳ್ಳೆಯದಕ್ಕೆ ತೋರಿಸಿ. ಕರಾವಳಿಯ ಕೋಮುಗಲಭೆ ನಿಲ್ಲಿಸಲು ನಿಮ್ಮ ತಾಕತ್ತು ಬಳಸಿ ಎಂದಿದ್ದಾನೆ.

ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡೀಪಾರು ನೋಟಿಸ್ ನೀಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ:58ರಡಿ ನೋಟೀಸ್ ಜಾರಿ ಮಾಡಲಾಗಿದೆ. ಜೂ. 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article