ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಕಾಮತ್ ಭೇಟಿ: ಪರಿಶೀಲನೆ

ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಕಾಮತ್ ಭೇಟಿ: ಪರಿಶೀಲನೆ


ಮಂಗಳೂರು: ಭಾರೀ ಮಳೆಯ ಕಾರಣಕ್ಕೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ 29 ರಲ್ಲಿ ಉಂಟಾಗಿದ್ದ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಪತ್ತುಮುಡಿ ಜನತಾ ಡಿಲಕ್ಸ್ ಬಳಿ ಉಂಟಾಗಿದ್ದ ನೆರೆಗೆ ಕಾರಣ, ಮುಂದೆ ಈ ಭಾಗದಲ್ಲಿ ಅಂತಹ ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಕ್ರಮ ಮೊದಲಾದ ವಿಷಯಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿ, ಮುಖ್ಯವಾಗಿ ರಾಜಕಾಲುವೆಗಳಿಗೆ ತಡೆಗೋಡೆ ಹಾಗೂ ಈಗಾಗಲೇ ಇರುವ ತಡೆಗೋಡೆಗಳ ಎತ್ತರ ಹೆಚ್ಚಿಸುವ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯೆ ಲೀಲಾವತಿ ಪ್ರಕಾಶ್, ಬಿಜೆಪಿ ಪ್ರಮುಖರಾದ ಜಯರಾಜ್ ಕೊಟ್ಟಾರಿ, ರಿತೇಶ್ ಬಲ್ಲಾಲ್‌ಬಾಗ್, ಪ್ರಸಾದ್ ಆಚಾರಿ, ನಾರಾಯಣ ಭಂಡಾರಿ, ವೆಂಕಟೇಶ್, ನಟರಾಜ್, ರಜನಿ ಶೆಟ್ಟಿ, ವಿಠ್ಠಲ್, ಪ್ರಕಾಶ್ ಕೊಡಿಯಾಲ್‌ಬೈಲ್ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article