ಬಿಜೆಪಿ ನಿಯೋಗ ಜಿಲ್ಲೆಗೆ ಭೇಟಿ

ಬಿಜೆಪಿ ನಿಯೋಗ ಜಿಲ್ಲೆಗೆ ಭೇಟಿ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ, ಕಾನೂನಿನ ದುರ್ಬಳಕೆ ಮಾಡಿ ಏಕಪಕ್ಷೀಯವಾಗಿ ನಡೆಸುತ್ತಿರುವ ಬಲವಂತದ ಕ್ರಮಗಳ ಸಹಿತ ಇತ್ತೀಚಿನ ಘಟನಾವಳಿಗಳ ಬಗ್ಗೆ ಪರಾಮರ್ಶೆ ಮತ್ತು ಪರಿಶೀಲನೆ ನಡೆಸಲು ಭಾರತೀಯ ಜನತಾ ಪಾರ್ಟಿ ನಿಯೋಗ ಸೋಮವಾರ ಜಿಲ್ಲೆಗೆ ಭೇಟಿ ನೀಡಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ನಿಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಇದ್ದರು.

ದಿನವೀಡಿ ನಗರದಲ್ಲಿ ನಿಯೋಗ ಸಂಸದರು, ಶಾಸಕರು ಮತ್ತು ಪಕ್ಷದ ಪ್ರಮುಖರ ಜತೆಯಲ್ಲಿ ಸಭೆ ನಡೆಸಿ, ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ನಿಯೋಗ ಮಾಹಿತಿ ಪಡೆಯಿತು. ನಗರದ ಸಂಘನಿಕೇತನದಲ್ಲಿ ಸುಹಾಸ್ ಹೆತ್ತವರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಮಾಹಿತಿ ಸಂಗ್ರಹ ಸಭೆಯಲ್ಲಿ ಭಾಗವಹಿಸಿದ್ದರು.

ಬಳಿಕ ನಿಯೋಗ ದಕ್ಷಿಣ ಕನ್ನಡ ಜಿಲ್ಲಾಽಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಽರ್‌ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಽಕ್ಷಕ ಡಾ. ಅರುಣ್ ಕೆ. ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಪ್ರಮುಖವಾಗಿ ಹಿಂದು ಮುಖಂಡರ ಮೇಲೆ ಎಫ್.ಐ.ಆರ್. ದಾಖಲು, ರಾತ್ರಿ ವೇಳೆ ಪೊಲೀಸರು ಮನೆಗೆ ನುಗ್ಗಿ ತನಿಖೆ ನೆಪದಲ್ಲಿ ಹಿಂದು ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವುದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರ ಮನೆಗೆ ಪ್ರವೇಶಿಸಿ ಪೋಟೊ ತೆಗೆಸುವ ಮೂಲಕ ಮಾನಸಿಕ ಹಿಂಸೆ ನೀಡುವ ಘಟನೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರ ಸಹಿತ ಮುಖಂಡರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article