
ಸುಹಾಸ್ ಶೆಟ್ಟಿ ಹತ್ಯೆ: ಬಂದರಿನಿಂದ ಫಂಡಿಂಗ್ ಶಂಕೆ
Monday, June 9, 2025
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಒಪ್ಪಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರದೀಪ್ ಸರಿಪಲ್ಲ ಸ್ವಾಗತಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿರುವ ಅವರು, ದಕ್ಕೆಯಲ್ಲಿರುವ ಮೀನುಗಾರಿಕಾ ಬಂದರು ಒಂದು ಮುಸ್ಲಿಂ ಪ್ರಾಬಲ್ಯವುಳ್ಳ ಪ್ರದೇಶವಾಗಿದೆ, ಅಲ್ಲಿ ಪ್ರತಿದಿನ ಕೋಟ್ಯಾಂತರ ರೂಪಾಯಿಗಳ ವಹಿವಾಟು ನಡೆಯುತ್ತದೆ, ಹಾಗಾಗಿ ಸುಹಾಸ್ ಶೆಟ್ಟಿಯ ಕೊಲೆಗೆ ಬಂದರಿನಿಂದ ಫಂಡಿಂಗ್ ಆಗಿರುವ ಬಲವಾದ ಶಂಕೆಯಿದೆ, ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಈ ಆಯಾಮವನ್ನು ಸಹ ತನಿಖೆ ಮಾಡಬೇಕೆಂದು ಕೋರುತ್ತೇವೆ ಎಂದರು.
ಕೃತ್ಯದಲ್ಲಿ ಸುಮಾರು 40ಕ್ಕೂ ಅಧಿಕ ಮಂದಿ ಭಾಗಿಯಾಗಿರುವ ಶಂಕೆಯೂ ಇದೆ ಎಂದು ಹೇಳಿದರು.