ಜನವಿರೋಧಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಜೆ.ಪಿ.ಯ ಪ್ರತಿಭಟನೆಗೆ ನಾಗರಿಕರಿಂದ ಅಭೂತಪೂರ್ವ ಬೆಂಬಲ: ಸತೀಶ್ ಕುಂಪಲ

ಜನವಿರೋಧಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ಜೆ.ಪಿ.ಯ ಪ್ರತಿಭಟನೆಗೆ ನಾಗರಿಕರಿಂದ ಅಭೂತಪೂರ್ವ ಬೆಂಬಲ: ಸತೀಶ್ ಕುಂಪಲ


ಮಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅಭಿವೃದ್ಧಿ ಶೂನ್ಯ ಜನವಿರೋಧಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜನರ ಜೀವನವನ್ನೇ ದುಬಾರಿಯಾಗಿಸಿದೆ. ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಜನರು ಗೃಹ ನಿರ್ಮಾಣದಿಂದ ಹಿಡಿದು ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಪಿಂಚನಿಗಳಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮ ಪಂಚಾಯತ್‌ಗಳಿಗೆ ರಾಜ್ಯ ಸರ್ಕಾರದ ಅನುದಾನ ಶೂನ್ಯ. ಕೇಂದ್ರ ಸರ್ಕಾರದ 15ನೇ ಹಣಕಾಸು ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಸರ್ಕಾರ ಜನರ ಹಣ ಕೊಳ್ಳೆ ಹೊಡೆಯುವುದರಲ್ಲಿ ನಿರತವಾಗಿದೆ. ಲಂಚ ಕೊಡದೆ ಏನೂ ನಡೆಯಲು ಸಾಧ್ಯವಿಲ್ಲದಂತಹ ಸನ್ನಿವೇಶ ಬಂದಿದೆ. ಇವೆಲ್ಲದರ ವಿರುದ್ಧ ಭಾರತೀಯ ಜನತಾ ಪಾರ್ಟಿಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಕಛೇರಿ ಮುಂಭಾಗದಲ್ಲಿ ನಾಗರಿಕರ ಜತೆಯಲ್ಲಿ ಬಿ.ಜೆ.ಪಿ. ಪ್ರತಿಭಟನೆ ನಡೆಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಪ್ರತಿಭಟನೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸುವುದರ ಮೂಲಕ ಹೊಣೆಗೇಡಿ ಕಾಂಗ್ರೆಸ್ ಸರ್ಕಾರದ ಮೇಲಿರುವ ಅಸಮಾಧಾನವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಸುಮಾರು 45,000ಕ್ಕೂ ಅಧಿಕ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ. ಜಿಲ್ಲೆಯ ಸಂಸದರು, ಶಾಸಕರು, ಎಲ್ಲಾ ಜನಪ್ರತಿನಿಧಿಗಳು, ಪಕ್ಷದ ಜಿಲ್ಲೆಯ, ಮಂಡಲದ ಎಲ್ಲಾ ನಾಯಕರುಗಳು, ಕಾರ್ಯಕರ್ತರು ಮುಂಚೂಣಿಯಲ್ಲಿ ನಿಂತು ಜನಸಾಮಾನ್ಯರ ಜತೆಯಲ್ಲಿ ಪಕ್ಷ ಸದಾ ಇರಲಿದೆ ಎಂದು ಈ ಪ್ರತಿಭಟನೆ ತೋರಿಸಿಕೊಟ್ಟಿದೆ. ಅಭೂತಪೂರ್ವವಾಗಿ ಯಶಸ್ವಿ ಗೊಳಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಕುಂಪಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article