ಹಡಗು ದುರಂತ: ನಾಲ್ವರು ಇನ್ನೂ ನಾಪತ್ತೆ

ಹಡಗು ದುರಂತ: ನಾಲ್ವರು ಇನ್ನೂ ನಾಪತ್ತೆ

ಮಂಗಳೂರು: ಸಿಂಗಾಪುರ ದೇಶದ ಹಡಗು ಭಾರತದ ಸಮುದ್ರದಲ್ಲಿ ಬೆಂಕಿಗಾಹುತಿಯಾಗಿತ್ತು. ನಾನಾ ದೇಶಗಳ ಸಿಬ್ಬಂದಿಗಳಿದ್ದ ಹಡಗು ಕೇರಳ ಭಾಗದ ಅರಬ್ಭೀ ಸಮುದ್ರದಲ್ಲಿ ಹೊತ್ತಿ ಉರಿದಿತ್ತು. ಗಾಯಾಳುಗಳನ್ನು ರಕ್ಷಣೆ ಮಾಡಿ ಮಂಗಳೂರಿಗೆ ಕರೆತರಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 22 ಸಿಬ್ಬಂದಿಗಳ ಪೈಕಿ ನಾಲ್ವರು ಸಿಬ್ಬಂದಿಗಳು ಇದುವರೆಗೆ ಪತ್ತೆ ಆಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರೆದಿದೆ. ಘಟನೆ ನಡೆದು 56 ಗಂಟೆ ಕಳೆದರೂ ಹಡಗಿನ ಬೆಂಕಿ ಆರಿಲ್ಲ.

ತೈವಾನ್‌ನ ಸೆಕೆಂಡ್ ಇಂಜಿನಿಯರ್ ಯು ಬೊ ಫಾಂಗ್, ಮ್ಯಾನ್ಮರ್ನ ಕಾರ್ಪೆಂಟರ್ ಸಾನ್ ವಿನ್, ಇಂಡೋನೇಷ್ಯಾದ ಎಬಿ ಜಾನಲ್ ಅಹಿದಿನ್ ಮತ್ತು ತೈವಾನ್ನ ಮೋಟರ್ ಮ್ಯಾನ್ ಸಿಹ್ ಚಾಯ್ ವೆನ್ ನಾಪತ್ತೆ ಆದವರು.

ಚೀನಾ ಮೂಲದ ನಂ 1 ಆಯ್ಲಿರ್ ಲೂಯನ್ಲಿ ಮತ್ತು ಇಂಡೋನೇಷ್ಯಾದ ಫಿಟ್ಟರ್ ಸೋನಿಟೂರ್ ಹೆನ್ರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಪ್ರಾಣಾಪಾಯದಿಂದ ಪಾರು ಎಂದು ವೈದ್ಯರು ತಿಳಿಸಿದ್ದಾರೆ. ಬಾಕಿ ಸಿಬ್ಬಂದಿಗಳು ಮಂಗಳೂರಿನ ಹೊಟೇಲ್‌ನಲ್ಲಿ ಉಳಿದುಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article