ಮಧ್ಯಪ್ರಾಚ್ಯ ಉದ್ವಿಗ್ನತೆ: ವಿಮಾನ ಹಾರಾಟ ವ್ಯತ್ಯಯ

ಮಧ್ಯಪ್ರಾಚ್ಯ ಉದ್ವಿಗ್ನತೆ: ವಿಮಾನ ಹಾರಾಟ ವ್ಯತ್ಯಯ

ಮಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತಲೆದೋರಿದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಸಂಚಾರವನ್ನು ಮಂಗಳವಾರದಿಂದ ರದ್ದುಪಡಿಸಲಾಗಿದೆ.

ಸೋಮವಾರ ರಾತ್ರಿ ಕತಾರ್‌ನ ಅಮೆರಿಕ ಏರ್ಬೇಸ್ಗೆ ಇರಾನ್ ದಾಳಿ ನಡೆಸಿದ ಕಾರಣ ಮಂಗಳೂರಿನಿಂದ ದಮಾನ್ಗೆ ಹೊರಟ ಏರ್ ಇಂಡಿಯಾ ವಿಮಾನ ಅಲ್ಲಿ ಏರ್‌ಬೇಸ್ ಬಂದ್ ಮಾಡಿದ ಕಾರಣ ಮಸ್ಕತ್‌ಗೆ ತೆರಳಿತ್ತು. ಅಬುದಾಬಿಗೆ ಹೊರಟ ಇಂಡಿಗೋ ವಿಮಾನ ಸೌದಿ ಅರೇಬಿಯಾದಲ್ಲಿ ಇಳಿಯಲು ಅವಕಾಶ ಸಿಗದೆ ಮುಂಬೈಗೆ ಬಂದಿದೆ. ಈ ಎರಡು ವಿಮಾನಗಳು ಮಂಗಳವಾರ ಬೆಳಗ್ಗೆ ಮಂಗಳೂರಿಗೆ ವಾಪಸ್ ಮರಳಿವೆ.

ಮಂಗಳವಾರ ಕೊಲ್ಲಿ ರಾಷ್ಟ್ರ ಮತ್ತು ಮಂಗಳೂರು ನಡುವೆ ಯಾವುದೇ ವಿಮಾನ ಬಂದುಹೋಗಿಲ್ಲ. ಅಬುದಾಬಿ-ಮಂಗಳೂರು, ದುಬೈ-ಮಂಗಳೂರು, ದುಬೈ-ಮಂಗಳೂರು, ದಮಾಮ್-ಮಂಗಳೂರು ವಿಮಾನಗಳು ಮಂಗಳೂರಿಗೆ ಆಗಮಿಸಿಲ್ಲ. ಅದೇ ರೀತಿ ಮಂಗಳೂರು-ದಮಾಮ್, ಮಂಗಳೂರು-ದುಬೈ ವಿಮಾನಗಳೂ ರದ್ದುಗೊಂಡಿವೆ. ಈ ನಡುವೆ ಮಂಗಳೂರು-ಮುಂಬೈ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಇಂಡಿಗೋ ದೇಶೀಯ ಯಾನ ಕೂಡ ನಡೆಸಿಲ್ಲ.

ಮಂಗಳೂರಿನಿಂದ ಕೊಲ್ಲಿ ರಾಷ್ಟ್ರಗಳಿಗೆ ಸಾಮಾನ್ಯವಾಗಿ ಮೂರು ಗಂಟೆ ಅವಧಿಯಲ್ಲಿ ತಲುಪಲು ಸಾಧ್ಯವಿದೆ. ಈಗ ಮಧ್ಯಪ್ರಾಚ್ಯ ರಾಷ್ಟ್ರಗಳ ಬಿಕ್ಕಟ್ಟು ಸಲುವಾಗಿ ಸುತ್ತು ಬಳಸಿ ವಿಮಾನಗಳು ಸಂಚರಿಸಬೇಕಾಗಿದೆ. 

ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧದ ಪರಿಸ್ಥಿತಿಯಿಂದಾಗಿ ಕರಾವಳಿಯ ಮಂದಿ ಸೇರಿದಂತೆ ಭಾರತದಿಂದ ಉದ್ಯೋಗಕ್ಕೆ ತೆರಳುವವರಿಗೆ ಅಲ್ಲಿಂದ ಇಲ್ಲಿಗೆ ಬರುವವರಿಗೆ ತೊಂದರೆಯಾಗಿದೆ. ಕೊಲ್ಲಿ ರಾಷ್ಟ್ರಗಳಿಗೆ ತೆರಳುವವರು ಹಾಗೂ ಟಿಕೆಟ್ ಬುಕ್ ಮಾಡುವವರು ಆಯಾ ವಿಮಾನಗಳ ಸಿಬ್ಬಂದಿ ಜೊತೆ ಸಂಚಾರ ಖಚಿತಪಡಿಸಿಕೊಂಡೇ ವಿಮಾನ ನಿಲ್ದಾಣಕ್ಕೆ ಆಗಮಿಸುವಂತೆ ಮಂಗಳೂರು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article