
ರಾಜ್ಯ ಮಟ್ಟದ ಕ್ರೀಡಾಕೂಟ: ಶಾಟ್ಪುಟ್ ಸ್ಪರ್ಧೆಯಲ್ಲಿ ದೀಪಾಲ್ ಕೆ.ಆರ್. ಪ್ರಥಮ ಸ್ಥಾನ
Tuesday, June 24, 2025
ಮಂಗಳೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ರಾಜ್ಯಮಟ್ಟದ ಕಿರಿಯರ ಕ್ರೀಡಾಕೂಟದಲ್ಲಿ 16 ವರ್ಷ ವಯೋಮಿತಿಯ ಶಾಟ್ಪುಟ್ ಸ್ಪರ್ಧೆಯಲ್ಲಿ ಮಂಗಳೂರಿನ ದೀಪಾಲ್ ಕೆ.ಆರ್. ಇವರು ಪ್ರಥಮ ಸ್ಥಾನ ಪಡೆದಿದ್ದಾರೆ.
ದೀಪಾಲ್ ಕೆ.ಆರ್. ಇವರು ಮಂಗಳೂರು ಉರ್ವ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಜಿಲ್ಲಾ ಮಟ್ಟದ ಸ್ಪರ್ಧೆಯಿಂದ ರಾಜ್ಯಮಟ್ಟದ ಕ್ರೀಡಾಸ್ಪರ್ಧೆಗೆ ಆಯ್ಕೆಯಾಗಿ ಇದೀಗ ರಾಜ್ಯಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇವರು ಎಸ್ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಛೇರಿಯ ಉದ್ಯೋಗಿ, ಬೆಳ್ತಂಗಡಿ ಲಾಯಿಲ ಗ್ರಾಮದ ರಾಘವೇಂದ್ರ ನಗರದ ರಮೇಶ್ ಮತ್ತು ನಳಿನಿ ದಂಪತಿಯ ಪುತ್ರ.