ಹಿಂಜಾವೇ.ಯ ಮುಖಂಡ ಸಮಿತ್ ರಾಜ್ ದರೆಗುಡ್ಡೆಗೆ 15 ದಿನಗಳ ನ್ಯಾಯಾಂಗ ಬಂಧನ

ಹಿಂಜಾವೇ.ಯ ಮುಖಂಡ ಸಮಿತ್ ರಾಜ್ ದರೆಗುಡ್ಡೆಗೆ 15 ದಿನಗಳ ನ್ಯಾಯಾಂಗ ಬಂಧನ


ಮೂಡುಬಿದಿರೆ: ಮೈಟ್ ಕಾಲೇಜು ಬಳಿ ಇತ್ತೀಚೆಗೆ ನಡೆದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿರುವವರಿಗೆ ಬಸ್ ಮಾಲಕ ಸ್ಥಳದಲ್ಲಿಯೇ ಪರಿಹಾರ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಹೋರಾಟ ನಡೆಸಿದ್ದ ಹಿಂದೂ ವೇದಿಕೆಯ ಮುಖಂಡ ಸಮಿತ್ ರಾಜ್ ದರೆಗುಡ್ಡೆಯನ್ನು ಮೂಡುಬಿದಿರೆ ಪೊಲೀಸರು ಗುರುವಾರ ಕಾಕ೯ಳದ ವಾಣಿಜ್ಯ ಸಂಕೀಣ೯ವೊಂದರಿಂದ ಬಂಧಿಸಿ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

2024ರ ನವಂಬರ್ 11ರಂದು ಮಿಜಾರು ಬಳಿ ಘಟನೆ ನಡೆದಿತ್ತು. ಘಟನೆಯಲ್ಲಿ ಖಾಸಗಿ ಬಸ್ 'ಮಾಸ್ಟರ್'' ಢಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರ ಸವಾರರಾದ ಸುಮಿತ್ರಾ ಮತ್ತು ಅವರ ಮಗಳು ಸಾನ್ವಿ ಗಾಯಗೊಂಡಿದ್ದರು. ಬಸ್ಸು ಚಾಲಕನ ನಿಲ೯ಕ್ಷ್ಯದ ಚಾಲನೆಯಿಂದಾಗಿ ಘಟನೆಗೆ ಸಂಭವಿಸಿದೆಂದು ಈ ಸಂದಭ೯ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೆ ಹಿಂದೂ ಪರ ಸಂಘಟನೆಯ ಕಾಯ೯ಕತ೯ರು ಹೋರಾಟಕ್ಕೆ ಇಳಿದಿದ್ದರು.

ಆ ಹೋರಾಟದಲ್ಲಿ ಸಮಿತ್ ರಾಜ್ ದರೆಗುಡ್ಡೆ ಮುಂಚೂಣಿಯಲ್ಲಿದ್ದು ಗಾಯಾಳುಗಳಿಗೆ ಪರಿಹಾರ ನೀಡಬೇಕೆಂದು ಪಟ್ಟು ಹಿಡಿದಿದ್ದರಿಂದ ಅಪಘಾತ ಸಂಭವಿಸಿದ ಕೆಲವೇ ಗಂಟೆಗೊಳಗಾಗಿ ಬಸ್ ಮಾಲಕ ರೂ. 5 ಲಕ್ಷವನ್ನು ಗಾಯಾಳುಗಳಿಗೆ ಪರಿಹಾರ ನೀಡಿದ್ದರು.

ಇತ್ತ ಬಸ್ಸಿನ ಮಾಲಕ ಬಸ್ಸಿಗೆ ಹಾನಿಗೊಳಿಸಿರುವುದಲ್ಲದೆ ತನ್ನಿಂದ ರೂ.5 ಲಕ್ಷ ಬೇಡಿಕೆ ಮುಂದಿಟ್ಟು ವಸೂಲಿ ನಡೆಸಿರುವ ಬಗ್ಗೆ  ಪೊಲೀಸರಿಗೆ ದೂರು ನೀಡಿದ್ದರು. ಇದೇ ವಿಷಯವನ್ನು ಮುಂದಿಟ್ಟು ಪೊಲೀಸರು ತನಿಖೆ ನಡೆಸಿ ಸಮಿತ್ ರಾಜ್ ನನ್ನು ಬಂಧಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article