
ಮೂಡುಬಿದಿರೆಯಲ್ಲಿ ‘ಮಂಡಲ ವಿಶೇಷ ಕಾಯ೯ಕಾರಿಣಿ ಮತ್ತು ವಿಕಸಿತ ಭಾರತ ಸಂಕಲ್ಪ ಸಭೆ’
Sunday, June 22, 2025
ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲದ ‘ಮಂಡಲ ವಿಶೇಷ ಕಾರ್ಯಕಾರಿಣಿ ಮತ್ತು ವಿಕಸಿತ ಭಾರತ ಸಂಕಲ್ಪ ಸಭೆ’ಯು ಶನಿವಾರ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಿತು.
ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರುಗಳಾದ ಸುನೀಲ್ ಆಳ್ವ, ಶಾಂತಿಪ್ರಸಾದ್ ಹೆಗ್ಡೆ, ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಜಿಲ್ಲಾ ಎಸ್ಸಿ ಮೊರ್ಚಾ ಅಧ್ಯಕ್ಷ ಜಗನ್ನಾಥ ಬೆಳುವಾಯಿ, ಮಂಡಲ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ಹರಿಪ್ರಸಾದ್ ಶೆಟ್ಟಿ ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಯುಳ್ಳ ಪ್ರಮುಖರು, ಮುಖಂಡರು ,ಕಾರ್ಯಕರ್ತರು ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.