ಮೂಡುಬಿದಿರೆ ತಾಲೂಕು ಭಜನಾ ಪರಿಷತ್ತು ಸಭೆ

ಮೂಡುಬಿದಿರೆ ತಾಲೂಕು ಭಜನಾ ಪರಿಷತ್ತು ಸಭೆ


ಮೂಡುಬಿದಿರೆ: ತಾಲೂಕಿನ ಭಜನಾ ಪರಿಷತ್ ಸಭೆಯು ಮೂಡಬಿದಿರೆಯ ಯೋಜನಾ ಕಚೇರಿಯಲ್ಲಿ ನಡೆಯಿತು.

ಭಜನಾ ಪರಿಷತ್ತಿನ ನಿರ್ದೇಶಕ ದಿನೇಶ್ ಡಿ. ಭಜನಾ ಕಮ್ಮಟ ಹಾಗೂ ಭಜನೆಯ ಕುರಿತು ಮಾರ್ಗದರ್ಶನ ನೀಡಿದರು.

ತಾಲೂಕು ಭಜನಾ ಪರಿಷತ್ತ್‌ನ ಅಧ್ಯಕ್ಷ ಲಕ್ಷ್ಮಣ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.

ಭಜನಾ ಪರಿಷತ್ತಿನ ಸಮನ್ವಯ ಅಧಿಕಾರಿ ಸಂತೋಷ್ ಅಲಿಯೂರು ನಿಕಟಪೂರ್ವ ಅಧ್ಯಕ್ಷ ಅಶೋಕ್ ನಾಯ್ಕ್ ಕಳಸಬೈಲ್ ಹಾಗೂ ಎಲ್ಲ ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಧನಂಜಯ್ ಸ್ವಾಗತಿಸಿ, ಚಿತ್ತಾಡಿ ವಲಯದ ಮೇಲ್ವಿಚಾರಕಿ ಪುಷ್ಪ ಕಾಯ೯ಕ್ರಮ ನಿರೂಪಿಸಿದರು. ಪುತ್ತಿಗೆ ವಲಯದ ಮೇಲ್ವಿಚಾರಕ ಕೃಷ್ಣಪ್ಪ ಎಂ. ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article