ರಾಜ್ಯ ಸರಕಾರದ ಆಡಳಿತ ವಿರುದ್ಧ ದರೆಗುಡ್ಡೆಯಲ್ಲಿ ಪ್ರತಿಭಟನೆ

ರಾಜ್ಯ ಸರಕಾರದ ಆಡಳಿತ ವಿರುದ್ಧ ದರೆಗುಡ್ಡೆಯಲ್ಲಿ ಪ್ರತಿಭಟನೆ


ಮೂಡುಬಿದಿರೆ: ಕರ್ನಾಟಕ ರಾಜ್ಯ ಕಾಂಗ್ರೆಸ್ ಆಡಳಿತದ ವೈಫಲ್ಯ ಪ್ರಶ್ನಿಸಿ ದರೆಗುಡ್ಡೆ ಗ್ರಾಮ ಪಂಚಾಯತ್ ಆಡಳಿತ ಮತ್ತು ಗ್ರಾಮದ ಪ್ರಮುಖರು ಸೇರಿ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. 

ಧರೆಗುಡ್ಡೆ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಬಿಜೆಪಿ ಮಂಡಲ ಉಪಾಧ್ಯಕ್ಷ ಸೂರಜ್ ಜೈನ್, ಕರಾವಳಿ ಕೇಸರಿ ಸ್ಥಾಪಕ ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ ಪ್ರತಿಭಟನ ಕಾರರನ್ನು ಉದ್ದೇಶಿಸಿ ಮಾತನಾಡಿದರು.


ಜನರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ದರವನ್ನು ಹೆಚ್ಚಳಗೊಳಿಸಿ ಕಾಂಗ್ರೆಸ್ ಸರಕಾರ ವಂಚಿಸಿದೆ. ಅಕ್ರಮ ಸಕ್ರಮ, 9/11, ಹಕ್ಕು ಪತ್ರ ನೀಡುವಲ್ಲಿ ವಿಫಲವಾಗಿದೆ. ಕಡಿಮೆ ದರದಲ್ಲಿ ಸಿಗುತ್ತಿದ್ದ ಹೊಯ್ಗೆ, ಕೆಂಪು ಕಲ್ಲು ಸ್ಥಗಿತಗೊಳಿಸಿ, ದರ ಹೆಚ್ಚಳ ಆಗುವಲ್ಲಿ ರಾಜ್ಯ ಸರಕಾರ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದರು. 

ಕಾಂಗ್ರೆಸ್ ಸರಕಾರ ಆಡಳಿತ ಚುಕ್ಕಾಣಿ ಹಿಡಿದ ನಂತರ ದೊಡ್ಡ ಮಟ್ಟದ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದಾಗಿ ಮಾಧ್ಯಮಗಳು ಪ್ರಕಟಿಸುತ್ತಿರುವುದನ್ನು ತಿಳಿಸಿದರು. ಪಂಚಾಯತ್ ಸದಸ್ಯರು ಊರ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article