
ಕಡಂದಲೆ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ
Friday, June 27, 2025
ಮೂಡುಬಿದಿರೆ: ಯಕ್ಷ ಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ‘ಯಕ್ಷ ಧ್ರುವ-ಯಕ್ಷ ಶಿಕ್ಷಣ’ ಯಕ್ಷಗಾನ ಶಿಕ್ಷಣ ಅಭಿಯಾನದ ಪ್ರಸ್ತುತ ಸಾಲಿನ ಯಕ್ಷಗಾನ ತರಬೇತಿಯು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ ಕಡಂದಲೆಯಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು.
ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸಂಸ್ಥೆಯ ಮೂಡುಬಿದಿರೆ ಘಟಕದ ಗೌರವಾಧ್ಯಕ್ಷ ಹಾಗೂ ಕೇಂದ್ರ ಸದಸ್ಯ ಕೆ. ಶ್ರೀಪತಿಭಟ್ ಅವರು ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.
ಕೆಎಂಎಫ್ನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಕೆ. ಸುಚರಿತ ಶೆಟ್ಟಿ, ಯಕ್ಷ ಧ್ರುವ ಪಟ್ಲ ಫೌಂಡೇಷನ್ ಮೂಡುಬಿದಿರೆ ಘಟಕದ ಅಧ್ಯಕ್ಷ ದಿವಾಕರ್ ಶೆಟ್ಟಿ ಖಂಡಿಗೆ, ಸಂಚಾಲಕ ರವಿ ಪ್ರಸಾದ್ ಕೆ. ಶೆಟ್ಟಿ, ಉಪಾಧ್ಯಕ್ಷ ಸದಾಶಿವ ರಾವ್ ನೆಲ್ಲಿಮಾರು, ಮುಖ್ಯ ಶಿಕ್ಷಕ ದಿನಕರ ಕುಂಭಾಶಿ ಹಾಗೂ ಯಕ್ಷ ಗುರು ಅನ್ವಿತಾ ಕೆರೆಕಾಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸದಸ್ಯ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ಶ್ರೀಪತಿಭಟ್ ಅವರ ಮೊಮ್ಮಗ ಪ್ರಮಥ್ ಈ ಸಂದಭ೯ದಲ್ಲಿದ್ದರು. ಕಾರ್ಯಕ್ರಮದ ದಿನಕರ ಕುಂಭಾಶಿ ಸ್ವಾಗತಿಸಿದರು. ಸುಧಾಕರ ಪೊಸ್ರಾಲು ಕಾಯ೯ಕ್ರಮ ನಿರೂಪಿಸಿದರು. ಸಂಪತ್ ರಾಜ್ ವಂದಿಸಿದರು.