
ವಾಲ್ಪಾಡಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ
Monday, June 23, 2025
ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ಸರ್ಕಾರದ ಜನವೀರೋಧಿ ನೀತಿಯ ವಿರುದ್ಧ ಇಂದು ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಮುಖಂಡ ಸೋಮನಾಥ ಕೋಟ್ಯಾನ್ ಮಾತನಾಡಿ ರಾಜ್ಯ ಸರ್ಕಾರ ಜನ ವಿರೋಧಿ ನೀತಿಯನ್ನು ಅಳವಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಂಚಾಯತ್ ಅಧ್ಯಕ್ಷ ವಿಶಾಲಾಕ್ಷಿ, ಉಪಾಧ್ಯಕ್ಷ ಗಣೇಶ್ ಬಿ ಅಳಿಯೂರು ಸದಸ್ಯರಾದ ಪ್ರದೀಪ್ ಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.