
ಇರುವೈಲು ಪಂಚಾಯತ್ ಮುಂಭಾಗ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Monday, June 23, 2025
ಮೂಡುಬಿದಿರೆ: ರಾಜ್ಯ ಕಾಂಗ್ರೆಸ್ ಆಡಳಿತದ ವೈಫಲ್ಯ ಪ್ರಶ್ನಿಸಿ ಇರುವೈಲು ಗ್ರಾಮ ಪಂಚಾಯತ್ ಆಡಳಿತ ಮತ್ತು ಗ್ರಾಮಸ್ಥರು ಸೇರಿ ಪಂಚಾಯತ್ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಇರುವೈಲು ಪಂಚಾಯತ ಉಪಾಧ್ಯಕ್ಷ ಹಾಗೂ ಮಾಜಿ ಪಂಚಾಯತ್ ಅಧ್ಯಕ್ಷ ವಲೇರಿಯನ್ ಕುಟಿನ್ಹಾ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, 94c ಹಕ್ಕು ಪತ್ರಗಳಿಗೆ 9/11 ಸಿ ಖಾತಾ ನೀಡಿರುವುದನ್ನು ತಡೆ ಮಾಡಿರುವುದನ್ನು ತಕ್ಷಣದಿಂದಲೇ ಕೈ ಬಿಟ್ಟು ಹಿಂದಿನ ಮಾದರಿಯಲ್ಲಿಯೇ 9/11 ಖಾತಾ ನೀಡಬೇಕು ಹಾಗೂ ಗ್ರಾಮೀಣ ಭಾಗದಲ್ಲಿ ಗೃಹ ನಿರ್ಮಾಣಕ್ಕೆ ಬೇಕಾಗುವ ಮರಳು ಮತ್ತು ಕೆಂಪು ಕಲ್ಲು ಸಾಗಾಣಿಕೆಗೆ ಶಿಸ್ತು ನಿಯಮ ಸರಳೀಕರಣಗೊಳಿಸಿ ಮನೆ ಕಟ್ಟಲಿರುವ ಅದೆಷ್ಟೋ ಮಂದಿ ಬಡವರು ಮತ್ತು ಕಾರ್ಮಿಕರಿಗೆ ನೆರವಾಗಬೇಕೆಂದು ಒತ್ತಾಯಿಸಿದ ಅವರು ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕೆಂದರು.
ನಂತರ ಪಂಚಾಯತ್ ಕಾರ್ಯದರ್ಶಿಗೆ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಪಂಚಾಯತ್ ಅಧ್ಯಕ್ಷೆ ಲಲಿತ ಮುಗೇರ ಹಾಗೂ ಸದಸ್ಯರುಗಳಾದ ನಾಗೇಶ್ ಅಮೀನ್, ನವೀನ್ ಪೂಜಾರಿ ಕಿಟ್ಟುಬೆಟ್ಟು ,ರುಕ್ಮಿಣಿ ,ಮೋಹಿನಿ, ಕುಸುಮ,ಜಯಶಂಕರ್, ಉಷಾ ಹಾಗೂ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.