ಬಿಜೆಪಿಯಿಂದ ಪುತ್ತಿಗೆ ಗ್ರಾ.ಪಂ. ಮುಂಭಾಗ ಪ್ರತಿಭಟನೆ

ಬಿಜೆಪಿಯಿಂದ ಪುತ್ತಿಗೆ ಗ್ರಾ.ಪಂ. ಮುಂಭಾಗ ಪ್ರತಿಭಟನೆ


ಮೂಡುಬಿದಿರೆ: ಕರ್ನಾಟಕ ಸರಕಾರದಿಂದ ಜನಸಾಮಾನ್ಯರಿಗೆ ನೀಡುತ್ತಿರುವ ಸರಕಾರಿ ಸೇವೆಗಳನ್ನು ಕಠಿಣಗೊಳಿಸಿರುವುದನ್ನು ತಕ್ಷಣದಿಂದಲೇ ಕೈ ಬಿಡುವಂತೆ ಸರಕಾರವನ್ನು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

9&11, ಖಾತಾ, ಪ್ಲಾಟಿಂಗ್ ಸಮಸ್ಯೆ, ಮನೆಯ ನಂಬರ್, ವಸತಿ ಯೋಜನೆ, ಸಂಧ್ಯಾ ಸುರಕ್ಷಾ, ಮರಳು ಮತ್ತು ಕೆಂಪುಕಲ್ಲು ಸಾಗಾಣಿಕೆ, 94ಸಿ ಅಡಿಯಲ್ಲಿ ಹಕ್ಕು ಪತ್ರ ಸಮಸ್ಯೆಗಳು ಹಾಗೂ ಸರಕಾರದ ಬ್ರಷ್ಟಾಚಾರದ ಬಗ್ಗೆ ಬಿಜೆಪಿಯ ದ.ಕ. ಜಿಲ್ಲಾ ಸದಸ್ಯರಾದ ನ್ಯಾಯವಾದಿ ಎಂ. ಬಾಹುಬಲಿ ಪ್ರಸಾದ್ ಮಾತನಾಡಿದರು. 


ಪುತ್ತಿಗೆಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗವರ್ಮ ಜೈನ್, ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಶಶಿಧರ್ ಪಿ. ನಾಯಕ್, ಗ್ರಾಮ ಪಂಚಾಯತ್‌ನ ಸದಸ್ಯರು ದಿನೇಶ್ ಗೌಡ, ಸುಮ ಭಟ್, ಸಾರಿಕಾ ಆಚಾರ್ಯ, ಅಪ್ಪಿ ಹಾಗೂ ಇತರ ಸದಸ್ಯರು. ಬಿಜೆಪಿಯ ಕಾರ್ಯಕರ್ತರಾದ ಶಶಿಧರ್ ಎಸ್. ಅಂಚನ್ ಎನಿಕ್ರಿಪಲ್ಲ, ನಾಗರಾಜ ಕರ್ಕೇರ, ಉದಯಕುಮಾರ್ ಶೆಟ್ಟಿ, ಪ್ರಭಾಕರ ಕುಲಾಲ್, ಕಿಶೋರ್ ಕುಮಾರ್, ಸಚಿನ್ ಭಟ್, ಗಿರಿಶ್ ಹಂಡೇಲ್ ಮತ್ತಿತರರು ಭಾಗವಹಿಸಿದ್ದರು.

ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಗೆ ಆಗ್ರಹ ಪತ್ರವನ್ನು ಗ್ರಾಮ ಪಂಚಾಯತ್‌ನ ಸಿಬ್ಬಂದಿ ಮೂಲಕ ಹಸ್ತಾಂತರಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article