ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪ.ಪೂ. ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ

ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪ.ಪೂ. ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಇದರ ಆಶ್ರಯದಲ್ಲಿ ಜೂ 23ರಂದು ‘ವೃತ್ತಿ ಮಾರ್ಗದರ್ಶನ ತರಬೇತಿ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ವೃತ್ತಿ ಮಾರ್ಗದರ್ಶನ ಸಲಹೆಗಾರ ವಿಪಿನ್ ನಾರಾಯಣನ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಟಿಕದಷ್ಟು ಸ್ಪಷ್ಟವಾದ ಗುರಿಯನ್ನು ಹೊಂದಿರಬೇಕು. ಈ ಗುರಿಯನ್ನು ಸಾಧಿಸಲು ವಿದ್ಯಾರ್ಥಿಗಳು ಇದಕ್ಕೆ ಪೂರಕವಾಗಿ ಮಾಹಿತಿಗಳನ್ನು ಸಂಗ್ರಹಿಸಬೇಕು. ಗುರಿಯನ್ನು ತಲುಪುವಲ್ಲಿ ಕಾರ್ಯಾಪ್ರವೃತರಾಗಬೇಕು. ವಿದ್ಯಾರ್ಥಿಗಳು ದ್ವಿತೀಯ ಪದವಿ ಪೂರ್ವ ಶಿಕ್ಷಣವನ್ನು ಪೂರೈಸಿದ ನಂತರದ ದಿನಗಳಲ್ಲಿ ಯಾವ ರೀತಿಯ ಆಯ್ಕೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.


ಇನ್ನೋರ್ವ ಸಂಪನ್ಮೂಲ ವ್ಯಕ್ತಿ 18 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಮಂಗಳೂರಿನ ಮಾಜಿ ಕಮಾಂಡಿಂಗ್ ಅಧಿಕಾರಿ ಗ್ರೇಸಿಯನ್ ಸಿಕ್ವಿಯೆರಾ ಮಾತನಾಡಿ, ಭಾರತೀಯ ಸೇನೆಯು ಭಾರತದ ಅತ್ಯಂತ ಪ್ರತಿಷ್ಠಿತ ಸಂಸ್ಥೆಯಾಗಿದೆ. ಭಾರತೀಯ ಸೇವೆಯು ವಿಶ್ವದ ಅತಿದೊಡ್ಡ ಹುದ್ದೆಗಳಲ್ಲಿ ಒಂದಾಗಿದೆ. ಭಾರತೀಯ ಸೇನೆಯು ಪ್ರತಿ ವರ್ಷ ಸಾವಿರಾರು ಉದ್ಯೋಗಾವಕಾಶಗಳನ್ನು ಪ್ರಕಟಿಸುತ್ತದೆ. ಭಾರತೀಯ ಸೇನೆಯ ಒಳಗೆ ಇರುವ ಬೇರೆ ಬೇರೆ ಹುದ್ದೆಗಳ ಮಾಹಿತಿಯನ್ನು ನೀಡುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಸೇನೆಯಲ್ಲಿ ತಮ್ಮ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ವಿದ್ಯಾರ್ಥಿಗಳು ಜೀವನದಲ್ಲಿ ಯಾವುದೇ ಆಯ್ಕೆಯನ್ನು ಮಾಡಿಕೊಳ್ಳುವಾಗಲೂ ಕೂಡ ಆ ಆಯ್ಕೆಯ ಬಗ್ಗೆ ಪೂರ್ಣ ಪ್ರಮಾಣದ ಆತ್ಮವಿಶ್ವಾಸ ಇರಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ಥಾ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಗುರಿಯನ್ನು ಹೊಂದಿರುತ್ತಾನೆ. ತಮ್ಮ ಮುಂದೆ ಹಲವಾರು ಅವಕಾಶಗಳು ತೆರೆದಿರುತ್ತದೆ. ಆದರೆ ಈ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಮಾಹಿತಿಯ ಕೊರತೆ ಇರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣದ ನಂತರ ಇರುವ ಆಯ್ಕೆಗಳ ಕುರಿತಾಗಿ ತಿಳಿದುಕೊಳ್ಳಲು ಈ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಬೋಧಕ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಪ್ರಕಾಶ್ ಬಿ. ಹಾಗೂ ಸದಸ್ಯ ಪ್ರಶಾಂತ್ ಕೆ. ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕರಾದ ಫಿಲೋಮಿನಾ ಮೊಂತೇರೋ ಸ್ವಾಗತಿಸಿ, ಭರತ್ ಕುಮಾರ್ ವಂದಿಸಿದರು. ಸತ್ಯಲತಾ ರೈ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article