ಹಲ್ಲೆ ಪ್ರಕರಣಕ್ಕೆ ಸ್ಪಷ್ಟಣೆ ನೀಡಿದ ದೇಗುಲದ ಅಧ್ಯಕ್ಷರು

ಹಲ್ಲೆ ಪ್ರಕರಣಕ್ಕೆ ಸ್ಪಷ್ಟಣೆ ನೀಡಿದ ದೇಗುಲದ ಅಧ್ಯಕ್ಷರು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ರೂಂ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾದ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಸ್ಪಷ್ಟಣೆ ನೀಡಿದ್ದು, ದೇವಸ್ಥಾನಕ್ಕೆ ಸಂಬಂಧಿಸಿದ ಅಧಿಕೃತ ವಸತಿಗ್ರಹದ ನಿರ್ವಾಹಕರಿಂದ ಹಲ್ಲೆ ಕೃತ್ಯ ನಡೆದಿರುವುದಿಲ್ಲ ಎಂದು ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿರುವುದು, ಖಾಸಗಿ ವಸತಿ ಗ್ರಹಗಳ ಏಜೆಂಟ್‌ಗಳು ಎಂದು ತಿಳಿದುಬಂದಿದ್ದು, ಅವರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಲಾಡ್ಜ್‌ನಲ್ಲಿ ತಂಗುವ ಗ್ರಾಹಕರನ್ನು ಸೆಳೆಯುವ ಖಾಸಗಿ ವಸತಿ ಗೃಹಗಳ ಏಜೆಂಟ್‌ಗಳು ತಮ್ಮ ವ್ಯವಹಾರದ ನಿಮಿತ್ತ ಯಾತ್ರಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ಇದಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಭದ್ರತೆ ನೀಡಲು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುವುದು. ಅನಾಧಿಕೃತ ಲಾಡ್ಜ್ ನಡೆಸುತ್ತಿರುವುದರ ವಿರುದ್ಧವೂ ಕ್ರಮ ಕೈಗೊಳ್ಳಬೇಕಿದೆ. ಯಾತ್ರಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಮುಂದಿನ ದಿನಗಳಲ್ಲಿ ಕ್ಷೇತ್ರದ ವತಿಯಿಂದ 1 ಸಾವಿರದಷ್ಟು ಕೊಠಡಿಗಳ ವಸತಿಗ್ರಹ ನಿರ್ಮಾಣಗೊಂಡು. ಭಕ್ತರಿಗೆ ಮಿತ ದರದಲ್ಲಿ ಕೊಠಡಿಗಳು ಲಭ್ಯವಾಗಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ತಿಳಿಸಿದ್ದಾರೆ.

ಪ್ರಕರಣ:

ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಪ್ರದೇಶದಲ್ಲಿ ಖಾಸಗಿ ವಸತಿ ಗೃಹ ಪಡೆಯಲು ಆಗಮಿಸಿದ ಯುವಕನೋರ್ವ ವಸತಿ ವೀಕ್ಷಿಸಿ ಬಳಿಕ ವಸತಿ ಪಡೆಯದೇ ತೆರಳಿದ್ದು, ಇದರಿಂದ ಅಸಮಾಧಾನಗೊಂಡ ಲಾಡ್ಜ್ ಏಜೆಂಟ್ ಯುವಕರು, ಯಾತ್ರಿಕ ಯುವಕನೊಂದಿಗೆ ವಾಗ್ವಾದ ನಡೆಸಿ, ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯ ವೀಡಿಯೋ ವೈರಲ್ ಆಗಿತ್ತು. ಪೊಲೀಸರು ಕೂಡ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article