ರಕ್ತಸ್ರಾವದಿಂದ ಬಾಣಂತಿ ಸಾವು

ರಕ್ತಸ್ರಾವದಿಂದ ಬಾಣಂತಿ ಸಾವು


ಸುಳ್ಯ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾದ ಮಹಿಳೆ ಹೆರಿಗೆಯ ಬಳಿಕ ರಕ್ತಸ್ರಾವದಿಂದ ಸಾವನ್ನಪ್ಪಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಪಾಜೆ ಗ್ರಾಮದ ಬಾಬು ಮತ್ತು ಚಿನ್ನಮ್ಮ ದಂಪತಿಯ ಪುತ್ರಿ, ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆಯ ಶೇಖರ ಮಲೆಕುಡಿಯ ಅವರ ಪತ್ನಿ ಮಧುರಾ (29) ಮೃತಪಟ್ಟವರು.

ಅವರ ವಿವಾಹ 6 ವರ್ಷಗಳ ಹಿಂದೆ ನೆರವೇರಿತ್ತು. ಮೂರೂವರೆ ವರ್ಷದ ಗಂಡು ಮಗುವಿದ್ದು, ಎರಡನೇ ಹೆರಿಗೆಗಾಗಿ ಜೂ. 2ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂ. 3ರಂದು ಸಂಜೆ 6.45ಕ್ಕೆ ಹೆಣ್ಣು ಮಗು ವಿಗೆ ಜನ್ಮ ನೀಡಿದ್ದ ಅವರಿಗೆ ರಾತ್ರಿ 9ಕ್ಕೆ ತೀವ್ರ ರಕ್ತಸ್ರಾವ ಆರಂಭವಾಗಿತ್ತು. ವೈದ್ಯರ ಸೂಚನೆಯಂತೆ ಮಂಗಳೂರಿನ ಲೇಡಿ ಗೋಶನ್‌ಗೆ ರಾತ್ರಿ 11.30ಕ್ಕೆ ಕರೆತಂದು ದಾಖಲಿಸಿದರೂ ರಾತ್ರಿ 12.37ಕ್ಕೆ ಕೊನೆಯುಸಿರೆಳೆದರು.

ವೈದ್ಯರ ನಿರ್ಲಕ್ಷ್ಯದ ಆರೋಪ..

ಬಳಿಕ ಮರಣೋತ್ತರ ಪರೀಕ್ಷೆ ಕೂಡ ನಡೆಸದೆ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ಮನೆಯಲ್ಲಿ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಲಾಗಿತ್ತು. ಈ ವಿಷಯ ತಿಳಿದ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಈದು ಮತ್ತಿತರ ನಾಯಕರು ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು, ಮಗುವಿನ ಭವಿಷ್ಯಕ್ಕಾಗಿ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article