ಜೂ.13 ರಂದು ಉಡುಪಿಗೆ ರೈಲ್ವೆ ಸಚಿವ ಸೋಮಣ್ಣ

ಜೂ.13 ರಂದು ಉಡುಪಿಗೆ ರೈಲ್ವೆ ಸಚಿವ ಸೋಮಣ್ಣ

ಉಡುಪಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಜೂ. 13ರಂದು ಉಡುಪಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಇಲ್ಲಿನ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಲಿದ್ದು, ಅಪರಾಹ್ನ 3 ಗಂಟೆಗೆ ಕುಂದಾಪುರ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣ ನಿಲ್ದಾಣಕ್ಕೆ ಭೇಟಿ ನೀಡುವರು. ಲಯನ್ಸ್ ಕ್ಲಬ್ ಹಂಗಳೂರು ವತಿಯಿಂದ 60 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನವೀಕರಣಗೊಂಡ ಕುಂದಾಪುರ ರೈಲ್ವೇ ಸ್ಟೇಷನ್‌ನ ಪ್ಲಾಟ್‌ಫಾರ್ಮ್, ನೂತನ ಛಾವಣಿ ಮತ್ತು ಗಾರ್ಡನ್ ಸುಂದರೀಕರಣ ಕಾಮಗಾರಿಗಳನ್ನು ಉದ್ಘಾಟಿಸುವರು.

ಕರಾವಳಿ ಭಾಗದ ರೈಲ್ವೆ ಸೇವೆಯನ್ನು ಹೆಚ್ಚಿಸಲು ಸ್ಥಳೀಯ ಸಂಸದರು ಮತ್ತು ಶಾಸಕರೊಂದಿಗೆ ಚರ್ಚಿಸಿ, ಬಳಿಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article