ಹಣಕ್ಕಾಗಿ ತಾಯಿಯನ್ನೇ ಕೊಂದ ಮಗ!

ಹಣಕ್ಕಾಗಿ ತಾಯಿಯನ್ನೇ ಕೊಂದ ಮಗ!


ಉಡುಪಿ: ಹಣಕ್ಕಾಗಿ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಮಗ ಕೊಲೆ ಮಾಡಿದ ಪ್ರಕರಣ ಮರಣೋತ್ತರ ಪರೀಕ್ಷೆಯಿಂದ ಬೆಳಕಿಗೆ ಬಂದಿದ್ದು, ಆರೋಪಿ ಮಗನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಕೊಲೆಗೀಡಾದವರನ್ನು ಪದ್ಮಾಬಾಯಿ (45) ಎಂದು ಗುರುತಿಸಲಾಗಿದೆ. ಆಕೆಯ ಮಗ ಈಶ ನಾಯಕ್ (26) ಕೊಲೆ ಆರೋಪಿ.

ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಲಾಗಿದ್ದರು. ಅಂದು ರಾತ್ರಿ ಪದ್ಮಾಬಾಯಿ ಅವರ ತಂಗಿ ಶಿಲ್ಪಾ ಎಂಬವರಿಗೆ ಕರೆ ಮಾಡಿದ ಈಶ ನಾಯಕ್, ತಾಯಿಗೆ ಸೌಖ್ಯವಿಲ್ಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕಳುಹಿಸುವಂತೆ ತಿಳಿಸಿದ್ದ. ಅದರಂತೆ ಶಿಲ್ಪಾ ಆನ್ಲೈನ್ ಮೂಲಕ ಹಣ ಕಳುಹಿಸಿದ್ದರು. ಜೂ.19ರಂದು ಬೆಳಗ್ಗೆ ಶಿಲ್ಪಾರಿಗೆ ಕರೆ ಮಾಡಿದ ಈಶ, ತಾಯಿ ಬೆಳಗೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಿದ್ದ.

ಶಿಲ್ಪಾ ಆಸ್ಪತ್ರೆಗೆ ಬಂದು ನೋಡಿದಾಗ ಪದ್ಮಬಾಯಿ ಅವರ ಕುತ್ತಿಗೆ ಬಳಿ ಕೆಂಪಾಗಿದ್ದು ಕುತ್ತಿಗೆಯನ್ನು ಒತ್ತಿದಂತೆ ಕಂಡುಬಂದು, ಸಹೋದರಿಯ ಸಾವಿನ ಬಗ್ಗೆ ಸಂಶಯ ಇರುವುದಾಗಿ ಮಣಿಪಾಲ ಪೊಲೀಸರಿಗೆ ದೂರು ನೀಡಿದ್ದರು.

ಮಣಿಪಾಲ ಆಸ್ಪತ್ರೆಯ ಫಾರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಗಳು ಶವದ ಮರಣೋತ್ತರ ಪರೀಕ್ಷೆ ನಡೆಸಿ, ಇದೊಂದು ಕೊಲೆ ಎಂದು ದೃಢೀಕರಿಸಿದರು.

ಪ್ರಕರಣ ದಾಖಲಿಸಿದ್ದ ಮಣಿಪಾಲ ಪೊಲೀಸರು ತನಿಖೆ ನಡೆಸಿದಾಗ ಪದ್ಮಾಬಾಯಿ ಅವರನ್ನು ಮಗ ಈಶ ನಾಯ್ಕ್ ಹಣಕ್ಕಾಗಿ ಹಾಗೂ ಕೌಟುಂಬಿಕ ಕಲಹದಿಂದ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಆರೋಪಿ ಈಶ ನಾಯಕ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article