
ಮಹಾವೀರ ಜೈನ್ ಅವರಿಗೆ ಪಿಹೆಚ್ಡಿ ಪದವಿ
Monday, June 2, 2025
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ್ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿಹೆಚ್ಡಿ ಪದವಿ ಪಡೆದಿದ್ದಾರೆ.
ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ. ಬಿ.ಪಿ ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ‘ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್ಡಿ ಪದವಿಯನ್ನು ನೀಡಿದೆ.
ಇವರು ಧಾರ್ಮಿಕ ಉಪನ್ಯಾಸಕರು, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಕೂಡ ಆಗಿದ್ದಾರೆ.
ಇವರನ್ನು ಸಂಸ್ಥೆಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ. ಎಸ್ ಹಾಗೂ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ. ಅವರು ಅಭಿನಂದಿಸಿದ್ದಾರೆ.