ದಲಿತ ಮುಖಂಡ ಜನಾರ್ದಚಂಡ್ತಿಮಾರ್ ಮನೆಗೆ ಸ್ಪೀಕರ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ದಲಿತ ಮುಖಂಡ ಜನಾರ್ದಚಂಡ್ತಿಮಾರ್ ಮನೆಗೆ ಸ್ಪೀಕರ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ


ಬಂಟ್ವಾಳ: ಸೋಮವಾರ ಮುಂಜಾನೆ ನಿಧನರಾದ ಕಾಂಗ್ರೆಸ್ ಮುಖಂಡ, ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್ ಅವರ ಮನೆಗೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿ ಕುಟುಂನಸ್ಥರಿಗೆ ಸಾಂತ್ವನ ಹೇಳಿದರು.

ಕಾಂಗ್ರೆಸ್ ಪಕ್ಷದ ನಾಯಕರೂ, ದಲಿತರ ಧ್ವನಿಯಾಗಿ ದಲಿತ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಜನಾರ್ದನ ಚೆಂಡ್ತಿಮಾರ್ ಅವರ ನಿಧನ ತುಂಬಲಾರದ ನಷ್ಟವಾಗಿದ್ದು, ಅವರ ನಿಧನದ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಕುಟುಂಬ ವರ್ಗಕ್ಕೂ ನೀಡಲಿ ಎಂದು ಕುಟುಂಬಕ್ಕೆ ಸಾಂತ್ವನ ತಿಳಿಸಿದರು. 

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ರಝಕ್ ಕುಕ್ಕಾಜೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಮಂಗಳೂರು ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್ ನರಿಂಗಾನ, ಪ್ರಮುಖರಾದ ವಿಶ್ವನಾಥ ಗೌಡ ಮಣಿ, ರಾಜೀವ್  ಕಕ್ಕೆಪದವು ಸಹಿತ ದಲಿತ ಮುಖಂಡರು, ಜನಾರ್ದನ ಚೆಂಡ್ತಿಮಾರ್ ಕುಟುಂಬಸ್ಥರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article