ಮಂಗಳೂರು-ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

ಮಂಗಳೂರು-ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

ಮಂಗಳೂರು: ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು-2ನೇ ಘಟಕದಿಂದ ನೂತನವಾಗಿ ಜುಲೈ 3 ರಿಂದ ಮಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಹೊಸದಾಗಿ ರಾಜಹಂಸ ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ. 

ಪ್ರಯಾಣ ದರ ಮತ್ತು ನಿಲುಗಡೆಗಳ ವಿವರ: 

ಬಿಸಿರೋಡು, ಬಂಟ್ವಾಳ, ಕಾರಿಂಜ ಕ್ರಾಸ್, ಪೂಂಜಾಲಕಟ್ಟೆ, ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ. ಒಟ್ಟು ಪ್ರಯಾಣ ದರ ರೂ.110 ಸಾರ್ವಜನಿಕ ಪ್ರಯಾಣಿಕರು ನೂತನ ಸಾರಿಗೆ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article