ವಿದ್ಯಾರ್ಥಿ ಆತ್ಮಹತ್ಯೆ

ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಕೇರಳದ ಕೊಟ್ಟಾಯಂ ಮೂಲದ ವಿದ್ಯಾರ್ಥಿ ಹನೀಫ್ ಎಂಬಾತ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಗರದ ಕಾಲೇಜೊಂದರಲ್ಲಿ ಎಂಎಸ್ಸಿ ವಿದ್ಯಾರ್ಥಿಯಾಗಿರುವ ಈತ ಕೋಡಿಯಾಲ್‌ಬೈಲ್ ಬಳಿ ಪೇಯಿಂಗ್ ಗೆಸ್ಟ್ ಆಗಿದ್ದ. ಗುರುವಾರ ರಾತ್ರಿ ಊಟ ಮಾಡಲೆಂದು ಇತರರು ಕರೆದಾಗ ಒಳಗಿನಿಂದ ಯಾವುದೇ ಸ್ಪಂದನ ಇರಲಿಲ್ಲ ಎನ್ನಲಾಗಿದೆ. ಬಳಿಕ ಪರಿಶೀಲಿಸಿದಾಗ ಕಿಟಕಿಗೆ ನೈಲಾನ್ ಹಗ್ಗ ಹಾಕಿ ಕುತ್ತಿಗೆಗೆ ಬಿಗಿದಿರುವುದು ಬೆಳಕಿಗೆ ಬಂದಿದೆ. ಈತನ ಕೈಯಲ್ಲಿ ಬ್ಲೇಡ್‌ನಿಂದ

ಗೀರಿ ಗಾಯಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article