
ಶೋಕೇಸ್ ಗಾಜು ಒಡೆದ ವಿವಾಹಿತ ದಾರುಣ ಸಾವು
Friday, July 4, 2025
ಉಳ್ಳಾಲ: ಮನೆಯ ಶೋಕೇಸ್ ಗಾಜು ಕೈಯ್ಯಲ್ಲೇ ಒಡೆದ ಪರಿಣಾಮ ವಿವಾಹಿತನೋರ್ವ ತೀವ್ರ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿರುವ ಘಟನೆ ಮಾಡೂರು ಸೈಟ್ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ಅವರ ಪುತ್ರ ನಿತೇಶ್ ನಾಯಕ್(38) ಸಾವನ್ನಪ್ಪಿದವರು.
ಕೋಟೆಕಾರು ಬೀರಿ ಜಂಕ್ಷನ್ ಸಮೀಪವೇ ತಂದೆ, ಸಹೋದರನ ಜೊತೆಗೆ ಗಲಾಟೆ ನಡೆಸುತ್ತಾ ಬಂದಿದ್ದ ನಿತೇಶ್, ಮನೆಯಲ್ಲಿಯೂ ಸಹ ನಿತ್ಯದಂತೆ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಆಕ್ರೋಶದಿಂದ ಮನೆಯೊಳಗಿರುವ ಶೋಕೇಸ್ ಗಾಜನ್ನು ಒಡೆದಿದ್ದು, ಈ ವೇಳೆ ಕೈಯ ಪ್ರಮುಖ ನರಕ್ಕೆ ಗಾಯಗಳಾಗಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
ನಿತೇಶ್, ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ದರು. ಗುರುವಾರ ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಗಲಾಟೆ ನಡೆಸಿದ್ದರು.
ಮೃತರ ತಾಯಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.