ಪಿಎಸ್‌ಐ ಆತ್ಮಹತ್ಯೆ: ಧರ್ಮಸ್ಥಳ ಪ್ರಕರಣಕ್ಕೂ ತಳುಕು, ಪುತ್ರಿಯಿಂದ ಕೇಸು ದಾಖಲು

ಪಿಎಸ್‌ಐ ಆತ್ಮಹತ್ಯೆ: ಧರ್ಮಸ್ಥಳ ಪ್ರಕರಣಕ್ಕೂ ತಳುಕು, ಪುತ್ರಿಯಿಂದ ಕೇಸು ದಾಖಲು


ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖಾ 2 ವಿಭಾಗದ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಘಟಕಾಂಬಳೆ ಅವರ ಬಗ್ಗೆ ಸಮವಸ್ತ್ರದಲ್ಲಿರುವ ಭಾವಚಿತ್ರವನ್ನು ಹಾಕಿ ಅವರ ಆತ್ಮಹತ್ಯೆ ಹಾಗೂ ಧರ್ಮಸ್ಥಳ ಪ್ರಕರಣಕ್ಕೂ ತಳುಕು ಹಾಕಿ ಸಾಮಾಜಿಕ ತಾಣದಲ್ಲಿ ವೈರಲ್ ಮಾಡಿರುವ ಬಗ್ಗೆ ಅವರ ಪುತ್ರಿ ಶಿರಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಂದೆಯವರು ಇತ್ತೀಚೆಗೆ ವೈಯಕ್ತಿಕ ಕಾರಣದಿಂದ ಬಂಟ್ವಾಳದ ಬಾಡಿಗೆ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಜು.28 ರಂದು ತನ್ನ ಮೊಬೈಲಿನಲ್ಲಿ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸಿಸುತ್ತಿದ್ದಾಗ, ನಾಲ್ಕು ಇನ್ಟಾಗ್ರಾಂ ಖಾತೆಗಳಲ್ಲಿ ತಂದೆಯ ಸಮವಸ್ತ್ರದಲ್ಲಿರುವ ಭಾವಚಿತ್ರವನ್ನು ಹಾಕಿ, ಅವರ ಆತ್ಮಹತ್ಯೆಗೆ ಹಾಗೂ ಧರ್ಮಸ್ಥಳದಲ್ಲಿ ಎಸ್‌ಐಟಿ ತಂಡದಿಂದ ನಡೆಯುತ್ತಿರುವ ಪ್ರಕರಣವೊಂದರ ತನಿಖೆಗೂ ಸಂಬಂಧ ಕಲ್ಪಿಸುವಂತಹ ಮಾನ ಹಾನಿಕರ ಪೋಸ್ಟ್ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂದು ಪುತ್ರಿ ಕ್ಷಮಾ ದೂರಿನಲ್ಲಿ ತಿಳಿಸಿದ್ದಾರೆ.

ತಂದೆಯ ಬಗ್ಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿ ಶಾಂತಿ ಭಂಗ ಮಾಡುತ್ತಿರುವ, ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವಂತಹ ಪೋಸ್ಟ್ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಅವರು ನೀಡಿದ ದೂರಿನಂತೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article