ಈಜು ಸ್ಪರ್ಧೆ ರಾಜ್ಯ ಮಟ್ಟಕ್ಕೆ ಆಯ್ಕೆ

ಈಜು ಸ್ಪರ್ಧೆ ರಾಜ್ಯ ಮಟ್ಟಕ್ಕೆ ಆಯ್ಕೆ


ಬಂಟ್ವಾಳ: ಶಕ್ತಿ ವಿದ್ಯಾಸಂಸ್ಥೆ, ಮಂಗಳೂರು ಇದರ ಸಹಾಯೋಗದೊಂದಿಗೆ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿರ ವಿಭಾಗದಲ್ಲಿ ಕಲ್ಲಡ್ಕ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಅನನ್ಯ ಎ.ಆರ್. ಅವರು ಭಾಗವಹಿಸಿ 200 ಮೀಟರ್ ಬಟರ್ಫ್ಲೈ ಮತ್ತು 100 ಮೀಟರ್ ಫ್ರೀ ಸ್ಟೈಲಲ್ಲಿ ಚಿನ್ನದ ಪದಕಗಳನ್ನು 100 ಮೀಟರ್ ಬ್ಯಾಕ್ ಸ್ಟ್ರೋಕ್‌ನಲ್ಲಿ ಬೆಳ್ಳಿಯ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್ ಬಿ.ಕೆ. ನಾಯಕ್ ಇವರ ಶಿಷ್ಯರಾಗಿದ್ದು, ಮಂಗಳೂರಿನ ಸೈಂಟ್ ಅಲೋಸಿಸ್ ಈಜುಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ವಿನೋದ್ ಕಾರವಾರ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article