ಯೂಟ್ಯೂಬರ್ ಸಮೀರ್ ಎಮ್.ಡಿ. ವಿಚಾರಣೆ ಅಂತ್ಯ: ನಾಳೆ ಮತ್ತೆ ವಿಚಾರಣೆಗೆ ಬರಲು ಖಾಕಿ ಬುಲಾವ್
Sunday, August 24, 2025
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಮ್.ಡಿ. ಆ.24 ರಂದು ಬೆಳಗ್ಗೆ 1 ಗಂಟೆಗೆ ಬಂದು ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ಕಾರಿನಲ್ಲಿ ವಕೀಲರ ಜೊತೆ ವಾಪಸ್ ತೆರಳಿದ್ದಾನೆ.
ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಇಂದು ದಾಖಲೆ ಮೂಲಕ ವಿಚಾರಣೆ ನಡೆಸಿದ್ದು. ಆ.25 ರಂದು ಮತ್ತೆ ವಿಚಾರಣೆಗೆ ಬರಲು ನೋಟಿಸ್ ನೀಡಿ ಸೂಚನೆ ಕೊಟ್ಟು ದಾಖಲೆಗಳಿಗೆ ಸಹಿ ಪಡೆದು ಕಳುಹಿಸಿದ್ದಾರೆ. ಎಐ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ವಶಕ್ಕೆ ಪಡೆಯಲು ಬಾಕಿ ಇರುವುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.