ಯ್ಯೂಟ್ಯೂಬರ್‌ಗಳಿಗೆ ಅಪರಿಚಿತರಿಂದ ಹಲ್ಲೆ: ಉದ್ವಿಗ್ನ ಸ್ಥಿತಿ ನಿರ್ಮಾಣ

ಯ್ಯೂಟ್ಯೂಬರ್‌ಗಳಿಗೆ ಅಪರಿಚಿತರಿಂದ ಹಲ್ಲೆ: ಉದ್ವಿಗ್ನ ಸ್ಥಿತಿ ನಿರ್ಮಾಣ


ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಾಲ್ವರು ಯ್ಯೂಟ್ಯೂಬರ್‌ಗಳ ಮೇಲೆ ಅಪರಿಚಿತರು ಹಲ್ಲೆ ನಡೆಸಿದ ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಘಟನೆ ಬುಧವಾರ ಸಂಜೆ ನಡೆದಿದೆ.

ಅಜಯ್ ಅಂಚನ್, ಅಭಿಷೇಕ್, ವಿಜಯ್ ಮತ್ತು ಇನ್ನೋರ್ವರು ಹಲ್ಲೆಗೆ ಒಳಗಾದ ಯ್ಯೂಟ್ಯೂಬರ್ ಎಂದು ತಿಳಿದುಬಂದಿದೆ.

ಅಪರಿಚಿತರು ಯೂಟ್ಯೂಬರ್‌ಗಳಿಗೆ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಹಲ್ಲೆಗೊಳಗಾದ ಯೂಟ್ಯೂಬರ್‌ಗಳು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಹಲ್ಲೆ ನಡೆಸಿದವರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಭಾರೀ ಜನ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article