ಧರ್ಮಸ್ಥಳ ಸೌಜನ್ಯ ಮನೆಯ ಬಳಿ ಯೂಟ್ಯೂಬರ್ ಗಳ ಮೇಲೆ ದಾಳಿ

ಧರ್ಮಸ್ಥಳ ಸೌಜನ್ಯ ಮನೆಯ ಬಳಿ ಯೂಟ್ಯೂಬರ್ ಗಳ ಮೇಲೆ ದಾಳಿ

ಬೆಳ್ತಂಗಡಿ: ಧರ್ಮಸ್ಥಳ ಸೌಜನ್ಯ ಮನೆಯ ಬಳಿ ಬಿಗ್ ಬಾಸ್ ಸ್ಪೆ್ಧಿ ರಜತ್ ಎಂಬವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಸುಮಾರು 50ರಷ್ಟು ಜನ ಏಕಾಏಕಿ ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ.

Kudla rampage ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು Kudla rampage ಕ್ಯಾಮೆರಾಮ್ಯಾನ್ ಮೇಲೆ ದಾಳಿ ಮಾಡಲಾಗಿದೆ. ಕ್ಯಾಮೆರಾವನ್ನು ಪುಡಿ ಮಾಡಿದ್ದು, ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಬ್ಬರಿಗೆ ತೀವ್ರ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ಸೌಜನ್ಯ ಮನೆಯ ಪಾಂಗಾಳ ಕ್ರಾಸ್ ಸಮೀಪ ದಾಳಿ ನಡೆದಿದ್ದು, ಗಾಯಾಳುಗಳನ್ನು ಸದ್ಯ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article