ಕೆಎಸ್‌ಆರ್‌ಪಿ ಪೊಲೀಸ್ ನೇಣು ಬಿಗಿದು ಆತ್ಮಹತ್ಯೆ

ಕೆಎಸ್‌ಆರ್‌ಪಿ ಪೊಲೀಸ್ ನೇಣು ಬಿಗಿದು ಆತ್ಮಹತ್ಯೆ


ಕೊಣಾಜೆ: ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್ ಕಾನ್‌ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೂಲತಃ ಉತ್ತರ ಕರ್ನಾಟಕದ ಸಂಜೀವ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. 

ಮೃತರ ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟರ್ಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೊಣಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article