
ABVPಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು NSUIಗೆ ಸೇರ್ಪಡೆ
Wednesday, August 13, 2025
ಮಂಗಳೂರು: NSUIನ ತತ್ವ, ಸಿದ್ಧಾಂತವನ್ನು ಒಪ್ಪಿ ನಗರದ ABVPಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ಅವರ ನೇತೃತ್ವದಲ್ಲಿ ಮಲ್ಲಿಕಟ್ಟೆಯ ಇಂದಿರಾ ಕಾಂಗ್ರೆಸ್ ಭವನದಲ್ಲಿ NSUIಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮನಪಾ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ಡಿಸಿಸಿ ಮಾಧ್ಯಮ ವಕ್ತಾರ ಉದಯ್ ಆಚಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪವನ್ ಶೆಟ್ಟಿ ಅವರನ್ನು ಜಿಲ್ಲಾ NSUI ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಗೊಳಿಸಲಾಹಿತು.