
ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರದಲ್ಲಿ ಆ.27 ರಂದು ಶ್ರೀ ಗಣೇಶಚತುರ್ಥಿಯ ನಿಮಿತ್ತ ನೂರಎಂಟು ನಾರಿಕೇಳ ಗಣಪತಿ ಹವನ
Monday, August 25, 2025
ಮಂಗಳೂರು: ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಆ.27 ರಂದು ಶ್ರೀ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ.
ಅಂದು ಬೆಳಗ್ಗೆ 10.30ರಿಂದ ಲೋಕಕಲ್ಯಾಣಾರ್ಥವಾಗಿ ತಂತ್ರಿ ಉಳಿಯತ್ತಾಯ ವಿಷ್ಣು ಅಸ್ರ ಮಾರ್ಗದರ್ಶನದಲ್ಲಿ 108 ನಾರಿಕೇಳ ಗಣಪತಿ ಹವನ ನಡೆಯಲಿದೆ.
ಬೆಳಗ್ಗೆ 11.30ಕ್ಕೆ ಗಣಪತಿ ಹವನದ ಪೂರ್ಣಾಹುತಿ ಹಾಗೂ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ.