ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಸರು ಕುಡಿಕೆ ಉತ್ಸವ ಸಂಭ್ರಮ
ಡಿಜೆ ಬಳಸಿದ್ದಕ್ಕೆ ಕಾವೂರಿನಲ್ಲಿ ಕೇಸ್:
ನಗರದ ಹೊರವಲಯದ ಕಾವೂರು ಬಳಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರುಕುಡಿಕೆ ಉತ್ಸವದಲ್ಲಿ ಡಿ.ಜೆ. ಬಳಕೆ ಮಾಡಿದವರು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಉತ್ಸವದ ಹಿನ್ನಲೆಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನಲೆಯಲ್ಲಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಇದರಲ್ಲಿ ಮೆರವಣಿಗೆಗೆ ಡಿ.ಜೆ. ಬಳಕೆ ಮಾಡುವಂತಿಲ್ಲ ಎಂದು ನಿರ್ದೇಶನ ನೀಡಿದ್ದರು. ಆದರೆ ಉರುಂದಾಡಿಗುಡ್ಡೆಯ ಮೆರವಣಿಗೆಯಲ್ಲಿ ಡಿ.ಜೆ.ಬಳಕೆ ಮಾಡಿದ್ದಕ್ಕೆ ಕೆಲವು ಆರೋಪ ಮಾಡಿದ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಕೇಸು ದಾಖಲಾಗಿದೆ. ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿ ಅದಕ್ಕೆ ಬಳಸಿದ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
