ಫ್ರಾನ್ಸ್ ಗಾಳಿಪಟ ಉತ್ಸವಕ್ಕೆ ಟೀಮ್ ಮಂಗಳೂರು

ಫ್ರಾನ್ಸ್ ಗಾಳಿಪಟ ಉತ್ಸವಕ್ಕೆ ಟೀಮ್ ಮಂಗಳೂರು


ಮಂಗಳೂರು: ಫ್ರಾನ್ಸ್ ದೇಶದಲ್ಲಿ ಸೆ.13 ರಿಂದ ಜರಗಲಿರುವ ಜಗತ್ತಿನ ಅತೀ ದೊಡ್ಡ ಅಂತರ್ ರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಭಾರತದ ಪ್ರತಿನಿಧಿ ತಂಡವಾಗಿ ಮಂಗಳೂರಿನ ಸರ್ವೇಶ್ ರಾವ್ ನೇತ್ರತ್ವದ ’ ಟೀಮ್ ಮಂಗಳೂರು’ ಹವ್ಯಾಸಿ ಗಾಳಿಪಟ ತಂಡವು ಭಾಗವಹಿಸಲಿದೆ.

ಟೀಮ್ ಮಂಗಳೂರು ತಂಡವು ಈಗಾಗಲೇ ಜಾಗತಿಕ ಮಟ್ಟದಲ್ಲಿ 12 ದೇಶಗಳ ಗಾಳಿಪಟ ಉತ್ಸವಗಳಲ್ಲಿ ಭಾರತದ ಸಾಂಸ್ಕೃತಿಕ ವಿಷಯಗಳನ್ನು ಗಾಳಿಪಟ ವಿನ್ಯಾಸವನ್ನಾಗಿ ಬೃಹತ್ ಗಾಳಿಪಟಗಳನ್ನು ರಚಿಸಿ ಫ್ರಾನ್ಸ್, ಇಂಗ್ಲೆಂಡ್, ಕೆನಡಾ, ಇಟೆಲಿ, ಕೊರಿಯಾ, ಹಾಂಗ್ ಕಾಂಗ್, ಇಂಡೋನೆಷ್ಯ, ಕತಾರ್, ದುಬೈ, ಶ್ರೀಲಂಕಾ ಮುಂತಾದ ದೇಶಗಳಲ್ಲಿ ಭಾಗವಹಿಸಿವೆ. 

ಈ ಬಾರಿಯ ಗಾಳಿಪಟ ಉತ್ಸವಕ್ಕೆ ರಥದ ವಿನ್ಯಾಸದ ಗಾಳಿಪಟ ಈಗ ತಯಾರಿಯಾಗುತ್ತಿದೆ. 18 ಅಡಿ ಎತ್ತರ 10 ಅಡಿ ಅಗಲದ ಈ ಗಾಳಿಪಟದ ಕಲಾ ವಿನ್ಯಾಸವನ್ನು ದಿನೇಶ್ ಹೊಳ್ಳ ಮಾಡಿದ್ದು ಗಾಳಿಪಟ ರಚನೆಯಲ್ಲಿ ಪ್ರಾಣೇಶ್ ಕುದ್ರೋಳಿ, ಸತೀಶ್ ರಾವ್, ಅರುಣ್ ಸಹಕರಿಸುತ್ತಿದ್ದಾರೆ.

ಗಾಳಿಪಟದ ಹೊಲಿಗೆಯನ್ನು ಸರ್ವೇಶ್ ರಾವ್ ಮಾಡುತ್ತಿದ್ದಾರೆ. ಇಡೀ ಜಗತ್ತೇ ಇಂದು ನೀರಿನ ಬಗ್ಗೆ ಬರಗಾಲವನ್ನು ಅನುಭವಿಸುತ್ತಿದೆ. ‘ನೀರು ಈ ಭುವಿಯ ಸಕಲ ಜೀವ ಸಂಕುಲಗಳ ಚೇತನಾ ಶಕ್ತಿ, ಪ್ರತೀ ನೀರಿನ ಹನಿಯೂ ತುಂಬಾ ಮಹತ್ವದ್ದು, ನೀರಿನ ಸಂರಕ್ಷಣೆಯ ಬಗ್ಗೆ ಪಲ್ಲಕ್ಕಿಯಲ್ಲಿ ನೀರಿನ ತಂಬಿಗೆಯನ್ನು ಇಟ್ಟು ನೀರು ಈ ಭುವಿಯ ಪ್ರತ್ಯಕ್ಷ ದೇವರು ಎಂಬಂತೆ ಇನ್ನೊಂದು ಗಾಳಿಪಟವನ್ನು ಮಾಡಲಾಗುತ್ತಿದೆ. ಇದರಲ್ಲಿ ಮೇಲೆ ಆಕಾಶ ಕೆಳಗೆ ಬೆಟ್ಟ ನಡುವೆ ನೀರಿನ ತಂಬಿಗೆ, ಬಾಲಂಗೋಚಿಯಲ್ಲಿ ಮರ, ಗಿಡಗಳ ಹಸಿರು ಹಂದರವನ್ನು ಕೆಳಗಡೆ ನೀರಿನ ಶೇಖರಣೆ ಯನ್ನು ಅಂದರೆ ಹಸಿರು ಪರಿಸರ ಇದ್ದರೆ ನೀರು ಸಹಜವಾಗಿಯೇ ಸಂಗ್ರಹವಾಗುತ್ತದೆ ಎಂಬ ಸಂದೇಶವನ್ನು ಸಾರಲಾಗಿದೆ. 

ರಿಪ್ ಸ್ಟಾಪ್ ನೈಲಾನ್ ಬಟ್ಟೆಯಿಂದ ಅಪ್ಲಿಕ್ ಮಾದರಿಯಲ್ಲಿ ಈ ಗಾಳಿಪಟವನ್ನು ತಯಾರಿಸಲಾಗುತ್ತಿದೆ. ಮಂಗಳೂರಿನ ಅಶೋಕ ನಗರದ ಸರ್ವೇಶ್ ರಾ ರವರ ಮನೆಯಲ್ಲಿ ಈ ಗಾಳಿಪಟದ ತಯಾರಾಗುತ್ತಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article