ಮಂಗಳೂರು-ವಿಜಯಪುರ ರೈಲು ಖಾಯಂ

ಮಂಗಳೂರು-ವಿಜಯಪುರ ರೈಲು ಖಾಯಂ

ಮಂಗಳೂರು: ಮಂಗಳೂರಿನಿಂದ ಬಯಲು ಸೀಮೆಯನ್ನು ಸಂಪರ್ಕಿಸುವ ಪ್ರಮುಖ ರೈಲು ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಖಾಯಂಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. 

ನೈರುತ್ಯ ರೈಲ್ವೆ ವಲಯವು ರೈಲು ಸಂಖ್ಯೆ 07377/78 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಖಾಯಂಗೊಳಿಸಿ ಓಡಿಸುವ ಬಗ್ಗೆ ಅಧಿಕೃತವಾಗಿ ಪ್ರಕಟನೆಯನ್ನು ಹೊರಡಿಸಿದೆ. 

ಇದರ ಅನ್ವಯ ವಿಜಯಪುರದಿಂದ ಸೆ.1 ಹಾಗೂ ಮಂಗಳೂರು ಸೆಂಟ್ರಲಿನಿಂದ ಸೆಪ್ಟೆಂಬರ್ 2ರಿಂದ ಈ ರೈಲು ಖಾಯಂ ರೈಲಾಗಿ ಓಡಲಿದೆ. ಈ ನಿರ್ಧಾರದಿಂದ ಸುಬ್ರಹ್ಮಣ್ಯ, ಧರ್ಮಸ್ಥಳ, ಬಂಟ್ವಾಳ, ಪುತ್ತೂರು ಹಾಗೂ ಇತರ ನಗರಗಳಿಂದ ಹಾಸನ, ಹುಬ್ಬಳ್ಳಿ, ಗದಗ, ವಿಜಯಪುರ ಹಾಗೂ ಇನ್ನಿತರೆ ಕಡೆಗಳಿಗೆ ಹೋಗುವ ಭಕ್ತರು, ವಿದ್ಯಾರ್ಥಿಗಳು ಮತ್ತು ಇತರ ಪ್ರಯಾಣಿಕರಿಗೆ ಬಹಳಷ್ಟು ಪ್ರಯೋಜನವಾಗಲಿದೆ ಎಂದು ರೈಲು ಬಳಕೆದಾರರು ಸಂತಸ ವ್ಯಕ್ತಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article