ಹಕ್ಕು ಪ್ರಾಪ್ತಿಗೆ ಹೋರಾಟ ಅನಿವಾರ್ಯ: ಬಿ.ಎಂ. ಭಟ್
ಸಂಘದ ಅಧ್ಯಕ್ಷ ಮುಜಾಫರ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್.ಎಸ್. ಸ್ವಾಗತಿಸಿ, ಉಪಾಧ್ಯಕ್ಷ ವಿಜಯ ಜೈನ್ ವಂದಿಸಿದರು.
ಮುಖಂಡರಾದ ಹಸನ್ ಕುದ್ರೋಳಿ, ಹಂಝ, ವಿನಾಯಕ ಶೆಣೈ ತಲಪಾಡಿ, ಕಲಂದರ್ ಕೋಟೆಕಾರ್, ಸಿಖಂದರ್ ಬೇಗ್, ಚೆರಿಯೋನು ಸುರತ್ಕಲ್, ಮನ್ಸೂರ್ ಸೆಂಟ್ರಲ್ ಮಾರ್ಕೆಟ್, ಶಿವಾನಂದ, ಗಂಗಮ್ಮ, ಮುಸ್ತಫಾ ಸೆಲ್ವರಾಜ್, ಚಂದ್ರಹಾಸ್ ಪಡೀಲ್ ಉಮೇಶ್, ಗದಿಗಪ್ಪ, ಸಿಕಂದರ್ ಬೇಗ್, ವಿಜಯ ಜೈನ್, ಕಾಜ ಮೋಹಿಯುದ್ದಿನ್, ಎಂ.ಎನ್. ಶಿವಪ್ಪ, ಚಂದ್ರಶೇಖರ ಭಟ್, ಮೇಬಲ್ ಡಿಸೋಜ, ಶಾಲಿನಿ ಬೋಂದೆಲ್, ಅಬ್ದುಲ್ ಖಾದರ್ ಫಿಲೋಮೀನ, ಗುಡ್ಡಪ್ಪ, ರಫೀಕ್, ಸಲಾಂ ಸುರತ್ಕಲ್, ಎಂ.ಎಸ್. ಮೊಯಿದಿನ್ ಬೈಕಂಪಾಡಿ, ಮುತ್ತುರಾಜ್, ಖಾದರ್ ವಾಮಂಜೂರ್, ರಿಯಾಜ್ ಮದಕ, ರಫೀಕ್ ಪಾಂಡೇಶ್ವರ, ನೌಷಾದ್ ಕಣ್ಣೂರು, ಅಸ್ಲಮ್ ಕಾಟಿಪಳ್ಳ, ಧನಂಜಯ ಸುರತ್ಕಲ್, ಖಲೀಲ್ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 250ಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳು:
1. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿವ್ಯಾಪಾರಿಗಳ ಸಮಗ್ರ ಸಮೀಕ್ಷೆ ನಡೆಸಿ ಐಡಿ ಕಾರ್ಡ್, ಪ್ರಮಾಣ ಪತ್ರ ವಿತರಿಸಬೇಕು.
2. ನಿವೇಶನ ರಹಿತ ಬೀದಿ ವ್ಯಾಪಾರಿಗಳಿಗೆ ಮನೆ ನಿವೇಶನ ಒದಗಿಸಬೇಕು.
3. ಬೀದಿ ವ್ಯಾಪಾರಿಗಳು ಮತ್ತು ಅವರ ಕುಟುಂಬದ ಆರೋಗ್ಯಕ್ಕಾಗಿ ಉಚಿತ ವೈದ್ಯಕೀಯ ಸವಲತ್ತು ಪಡೆಯಲು ಆರೋಗ್ಯ ಕಾರ್ಡ್ ವಿತರಿಸಬೇಕು.
4. ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯನ್ನು ಮುಂದುವರಿಸಬೇಕು ಮತ್ತು ಸಾಲದ ಮಿತಿಯನ್ನು ಒಂದು ಲಕ್ಷದಿಂದ ಹತ್ತು ಲಕ್ಷಕ್ಕೆ ಏರಿಸಬೇಕು.
5. ಎಲ್ಲ ಬೀದಿ ವ್ಯಾಪಾರಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಬೇಕು.
6. ಬೀದಿಬದಿ ವ್ಯಾಪಾರಿಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸ್ಕಾಲರ್ ಶಿಪ್ ಯೋಜನೆ ಜಾರಿಗೊಳಿಸಬೇಕು
7. ನಗರ ಪಾಲಿಕೆ ಮತ್ತು ಪೋಲೀಸರ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕುಂದು ಕೊರತೆ ನಿವಾರಣಾ ಸಮಿತಿ ರಚಿಸಬೇಕು.
8. ವ್ಯಾಪಾರ ವಲಯವನ್ನು ವ್ಯಾಪಾರಿ ಮತ್ತು ಗ್ರಾಹಕ ಸ್ನೇಹಿಯಾಗಿ ವೈಜ್ಞಾನಿಕ ಮತ್ತು ಸುರಕ್ಷತೆಗೆ ಒತ್ತು ಕೊಟ್ಟು ನಿರ್ಮಿಸಬೇಕು.
9. ಮಂಗಳೂರು ನಗರದ ಹತ್ತು ಕಡೆಗಳಲ್ಲಿ ಆಹಾರ ಮಾರಾಟ ವಲಯ ನಿರ್ಮಿಸಬೇಕು ಎಂದು ನಿರ್ಣಯಗಳನ್ನು ಕೈಗೊಳ್ಳಲಾಯಿತು.



