ತೆಂಕಮಿಜಾರಿನಲ್ಲಿ ‘ಆಯುಷ್ಮಾನ್ ಆರೋಗ್ಯ ಕೇಂದ್ರ’ ನಿಮಾ೯ಣಕ್ಕೆ ಶಿಲಾನ್ಯಾಸ

ತೆಂಕಮಿಜಾರಿನಲ್ಲಿ ‘ಆಯುಷ್ಮಾನ್ ಆರೋಗ್ಯ ಕೇಂದ್ರ’ ನಿಮಾ೯ಣಕ್ಕೆ ಶಿಲಾನ್ಯಾಸ


ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೆಕಟ್ಟೆಯಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ‘ಆಯುಷ್ಮಾನ್ ಅರೋಗ್ಯ ಕೇಂದ್ರ’ ನಿರ್ಮಾಣ ಕಾಮಗಾರಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಶುಕ್ರವಾರ ಶಿಲಾನ್ಯಾಸಗೈದರು.

ತೆಂಕಮಿಜಾರು ಗ್ರಾ.ಪಂ. ಅಧ್ಯಕ್ಷೆ ಶಾಲಿನಿ ಸಾಲ್ಯಾನ್, ಸದಸ್ಯರಾದ ರುಕ್ಮಿಣಿ, ದಿನೇಶ್ ಭಟ್, ಕಲ್ಲಮುಂಡ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ತ್ರಿವೇಣಿ, ಸುರಕ್ಷಾ ಅಧಿಕಾರಿ ದಿಶಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ಹಾಗೂ ಸಮುದಾಯ ಆರೋಗ್ಯ ಅಧಿಕಾರಿ, ಮತ್ತಿತರರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಆಧಿಕಾರಿ ಸ್ವಾಗತಿಸಿ, ಕಾಯ೯ಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article