ಅಖಂಡ ಭಾರತ ಸಂಕಲ್ಪ ದಿನ: ಮೂಡುಬಿದಿರೆಯಲ್ಲಿ ಹಿಂದೂ ಸಂಘಟನೆಗಳಿಂದ ಪಂಜಿನ ಮೆರವಣಿಗೆ
Thursday, August 14, 2025
ಮೂಡುಬಿದಿರೆ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ಇದರ ವತಿಯಿಂದ ಸಾವಿರ ಕಂಬದ ಬಸದಿ ಬಳಿಯಿಂದ ಮೂಡುಬಿದಿರೆ ಸಮಾಜ ಮಂದಿರದವರೆಗೆ ಗುರುವಾರ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.
ಶ್ರೀ ಜೈನ ಮಠದ ಭಟ್ಟಾರಕ ಚಾರುಕೀತಿ೯ ಪಂಡಿತಾಚಾಯ೯ವಯ೯ ಸ್ವಾಮೀಜಿ ಸಾವಿರ ಕಂಬದ ಬಳಿ ಮೆರವಣಿಗೆಗೆ ಚಾಲನೆ ನೀಡಿದರು.
ಬಿಜೆಪಿ ಮುಖಂಡ ಕೆ. ಪಿ. ಜಗದೀಶ್ ಅಧಿಕಾರಿ, ವಿಹಿಂಪದ ಕಾಯ೯ದಶಿ೯ ಸುಚೇತನ್ ಜೈನ್, ಕಾಯ೯ಧ್ಯಕ್ಷ ಶ್ಯಾಮ್ ಹೆಗ್ಡೆ, ಹಿಂದೂ ಜಾಗರಣ ವೇದಿಕೆಯ ತಾಲೂಕು ಸಂಚಾಲಕ ಹರೀಶ್ಚಂದ್ರ ಹಾಗೂ ಪ್ರಮುಖರು ಈ ಸಂದಭ೯ದಲ್ಲಿದ್ದರು.



