ವಾಲ್ಪಾಡಿ ಗ್ರಾಮಸಭೆ: ಅಳಿಯೂರು ಪ್ರೌಢಶಾಲೆಗೆ ಖಾಯಂ ಶಿಕ್ಷಕರನ್ನು ನೀಡುವಂತೆ ಗ್ರಾಮಸ್ಥರ ಒತ್ತಾಯ

ವಾಲ್ಪಾಡಿ ಗ್ರಾಮಸಭೆ: ಅಳಿಯೂರು ಪ್ರೌಢಶಾಲೆಗೆ ಖಾಯಂ ಶಿಕ್ಷಕರನ್ನು ನೀಡುವಂತೆ ಗ್ರಾಮಸ್ಥರ ಒತ್ತಾಯ


ಮೂಡುಬಿದಿರೆ: ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಬರಬೇಕೆಂದು ಸರ್ಕಾರ ಕರೆ ನೀಡುತ್ತಿದೆ. ಆದರೆ 290 ಮಕ್ಕಳಿದ್ದು, ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಅಳಿಯೂರು ಪ್ರೌಢಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ. ಕ್ಲಕ್, ದೈಹಿಕ ಶಿಕ್ಷಣ ಶಿಕ್ಷಕರಿಗೆ ಎಸ್‌ಡಿಎಂಸಿಯಿಂದ ಸಂಬಳ ನೀಡುತ್ತಿದ್ದೇವೆ. ಶಾಲೆಗೆ ಖಾಯಂ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರನ್ನು ನೀಡಬೇಕೆಂದು ಗ್ರಾ.ಪಂ.ನ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಒತ್ತಾಯಿಸಿದರು.

ಅವರು ವಾಲ್ಪಾಡಿ ಗ್ರಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪ್ರಥಮ ಸುತ್ತಿನ ಗ್ರಾಮಸಭೆಯಲ್ಲಿ  ಮಾತನಾಡಿದರು.


ಅಳಿಯೂರು ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕಿನಲ್ಲಿರುವ ಇತರ ಶಾಲೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಥಿ೯ಗಳಿದ್ದಾರೆ. ಗರಿಷ್ಠ ಮಕ್ಕಳಿರುವ ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆರು ಮಂದಿ ಅತಿಥಿ ಶಿಕ್ಷಕರಿದ್ದಾರೆ. ಅವರಿಗೆ ಬೇರೆ ಅವಕಾಶ ಸಿಕ್ಕಾಗ ಕೆಲಸ ಬಿಡುವುದರಿಂದ ವಿದ್ಯಾರ್ಥಿಗಳ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಗ್ರಾಮಸ್ಥರ ಜತೆಗೂಡಿ  ಒತ್ತಾಯಿಸಿದ್ದಾರೆ. ಇಲಾಖೆಯ ಗಮಕ್ಕೆ ತರುವುದಾಗಿ ಶಿಕ್ಷಣ ಸಂಯೋಜಕ, ನೋಡೆಲ್ ಅಧಿಕಾರಿ ರಾಜೇಶ್ ಭಟ್ ಹೇಳಿದರು. 

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗೈರಾಗಿರುವುದಕ್ಕೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. 

ಬೆಳೆ ಸಮೀಕ್ಷೆ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿದ್ದೆ. ಸಮೀಕ್ಷೆ ಸಂದರ್ಭ ಗ್ರಾಪಂ ಅನ್ನು ಸಂಪರ್ಕಿಸದೇ ಇರುವುದರಿಂದ ಕೃಷಿ ಇಲಾಖೆ ಅಪೂರ್ಣ ಮಾಹಿತಿಯ ಆಧಾರದಲ್ಲಿ ಸಮೀಕ್ಷೆ ನಡೆಸುತ್ತಿದೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ ಎಂದು ತಾಪಂ ಮಾಜಿ ಸದಸ್ಯ ರುಕ್ಕಯ್ಯ ಪೂಜಾರಿ ಹೇಳಿದರು. 

ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಗರ್ ಸಹಿತ ವಿವಿಧ ಕಾಯಿಲೆಗಳಿಗೆ ಬೇಕಾದ ಔಷಧಿ ಇಲ್ಲ ಎಂದು ಸದಸ್ಯ ಅರುಣ್ ಕುಮಾರ್ ಶೆಟ್ಟಿ ಹೇಳಿದರು. ಈ ಕುರಿತು ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಅರೋಗ್ಯ ಸಹಾಯಕಿ ಅನಿತಾ ತಿಳಿಸಿದರು. 

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಉಪಾಧ್ಯಕ್ಷ ಗಣೇಶ್ ಬಿ. ಅಳಿಯೂರು, ಪಂಚಾಯತ್ ಸದಸ್ಯರು, ಪಿಡಿಒ ಮಂಜುಳಾ ಚಚೆ೯ಯಲ್ಲಿ ಪಾಲ್ಗೊಂಡಿದ್ದರು.

ಗ್ರಾಮಸಭೆಗೆ ಗ್ರಾಮಸ್ಥರ ಕೊರತೆ: 

ಪ್ರಮುಖ ಕೆಲವು ಇಲಾಖೆಯ ಅಧಿಕಾರಿಗಳು ಬಂದಿದ್ದರೂ, ಕೇವಲ ಬೆರಳೆಣಿಕೆಯ ಗ್ರಾಮಸ್ಥರಿರುವುದು ಕಂಡುಬಂತು. ಈ ಹಿಂದೆ ಗ್ರಾಮಸಭೆಯೊಂದು ಅಧಿಕಾರಿಗಳು, ಗ್ರಾಮಸ್ಥರು ಇಲ್ಲದೆ ರದ್ದಾಗಿತ್ತು. 

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article