
ತಾಕೊಡೆಯಲ್ಲಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ
ತರಬೇತಿ ಪಡೆದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ತಿಳಿಸಿ ತರಬೇತಿಯಿಂದ ಪಡೆದ ಪ್ರಯೋಜನ ಬಗ್ಗೆ ತಿಳಿಸಿದರು. ತರಬೇತಿ ನೀಡಿದ ಶುಭಲಕ್ಷ್ಮಿ ಮಾತಾನಾಡಿ, ತರಬೇತಿಯಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಕೊಡೆ ಚಚಿ೯ನ ಧರ್ಮ ಗುರು ಫಾ.ರೋಹನ್ ಲೋಬೊ ಅವರು ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿ ತರಬೇತಿಯಿಂದ ಮಹಿಳೆಯರಲ್ಲಿ ಸಕಾರಾತ್ಮಕ ಬದಲಾವಣೆ ಬಂದಿದೆ. ಇನ್ನೂ ಹೆಚ್ಚಿನ ತರಬೇತಿ ತಾಕೊಡೆಯಲ್ಲಿ ನಡೆದು ಹೆಚ್ಚಿನ ಮಹಿಳೆಯರಿಗೆ ಪ್ರಯೋಜನ ಸಿಗಲಿ ಎಂದು ಶುಭ ಹಾರೈಸಿದರು.
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಯೋತಿ ರಾಜ್ ಅವರು ಮಾತಾನಾಡಿ ಮಹಿಳೆಯರು ಸ್ವ ಉದ್ಯೋಗ ಮಾಡಲು ಹೆಚ್ಚಿನ ಕೌಶಲ್ಯದ ಅಗತ್ಯವಿದ್ದು ವಿಆರ್ ಡಿಎಫ್ ಮಹಿಳೆಯರಿಗೆ ಬೇಕಾದ ತರಬೇತಿ ಹಾಗೂ ಬೆಂಬಲ ನೀಡಲು ಸದಾ ಸಿದ್ದವಿದೆ ಎಂದು ತಿಳಿಸಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಮಾತನಾಡಿ ತರಬೇತಿ ನಂತರ ನಿಮ್ಮದೇ ಒಂದು ಬ್ರಾಂಡ್ ಹೆಸರಲ್ಲಿ ನಿಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು ಕರೆ ನೀಡಿದರು.
ಚರ್ಚ್ ಪಾಲನ ಮಂಡಳಿ ಕಾರ್ಯದರ್ಶಿ ಆಲ್ವಿನ್ ಪಿಂಟೋ, ಆಯೋಗ ಸಂಯೋಜಕ ಪಾವ್ಲ್ ಡಿಸೋಜಾ, ಬೆಥೆನಿ ಕಾನ್ವೆಂಟ್ ಸುಪೇರಿಯರ್ ಸಿಸ್ಟೆರ್ ರೀನಾ, ಸ್ತ್ರೀ ಸಂಘಟನೆ ಅಧ್ಯಕ್ಷೆ ಐವಿ ಕ್ರಾಸ್ತ ವೇದಿಕೆಯಲ್ಲಿದ್ದರು.
ಸ್ತ್ರೀ ಸಂಘಟನೆಯ ಕಾರ್ಯದರ್ಶಿ ಶಾಂತಿ ಪಿಂಟೋ ಸ್ವಾಗತಿಸಿದರು. ಲೋನಾ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ಲೀಜಾ ರೋಡ್ರಿಗಸ್ ವಂದಿಸಿದರು.