ಫಿಲೋಮಿನಾದಲ್ಲಿ ವೈಭವದ ಯಕ್ಷಗಾನ ಪ್ರದರ್ಶನ

ಫಿಲೋಮಿನಾದಲ್ಲಿ ವೈಭವದ ಯಕ್ಷಗಾನ ಪ್ರದರ್ಶನ


ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಪುತ್ತೂರು, ಯಕ್ಷ ಕಲಾಕೇಂದ್ರ, ಶಿಕ್ಷಕ ರಕ್ಷಕ ಸಂಘ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಆಶ್ರಯದಲ್ಲಿ ‘ಸೀತಾ ಪರಿತ್ಯಾಗ ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರಸಂಗವು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಅಪೂರ್ವವಾಗಿ ಸಂಪನ್ನಗೊಂಡಿತು.


ಸಂತ ಫಿಲೋಮಿನ ಕಾಲೇಜಿನಲ್ಲಿ ಪ್ರಾ೦ಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊ೦ತೆರೊ ಅವರ ಮಾರ್ಗದರ್ಶನದಲ್ಲಿ ಯಕ್ಷ ಕಲಾ ಕೇಂದ್ರದ ಮೂಲಕ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ‘ಯಕ್ಷಾಮೃತ’ ನಿರಂತರವಾಗಿ ನಡೆಯುತ್ತಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷಶಿಕ್ಷಣ ಅಭಿಯಾನದ ಮೂಲಕ ರಾಜ್ಯದ 94 ಶಾಲೆಗಳಲ್ಲಿ ಉಚಿತ ಯಕ್ಷ ಶಿಕ್ಷಣ ನಡೆಯುತ್ತಿದ್ದು, ಸಂಸ್ಥೆಯ ಜೊತೆ ಯಕ್ಷಗಾನ ಕಲೆಯ ಒಡಂಬಡಿಕೆ ಧ್ಯೋತಕವಾಗಿ ಈ ಕಾರ್ಯಕ್ರಮ ಮೂಡಿಬಂದಿದೆ.


ಸಭಾಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕರು ಅತಿ. ವಂ. ಲಾರೆನ್ಸ್ ಮಸ್ಕರೇನ್ಹಸ್ ಅವರು ಪಟ್ಲ ಸತೀಶ್ ಶೆಟ್ಟಿ ಯವರ ಸಾಧನೆಯನ್ನು ಪ್ರಶಂಸಿದರು. ಕಾಲೇಜಿನ ಸಾಂಸ್ಕೃತಿಕ ಔನತ್ಯಕ್ಕೆ ಯಕ್ಷ ಕಲಾ ಕೇಂದ್ರದ ಕೊಡುಗೆ ಮಹತ್ತರವಾದದು ಮತ್ತು ರಚನಾತ್ಮಕ ಕಾರ್ಯಕ್ರಮದ ಮೂಲಕ ಉನ್ನತಿಯನ್ನು ಸಾಧಿಸಲಿ ಎಂದು ಹಾರೈಸಿದರು.

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಗೌರವಾಧ್ಯಕ್ಷರಾದ ಸವಣೂರು ಸೀತಾರಾಮ ರೈ ರವರು ಫೌಂಡೇಶನ್‌ನ ಸಾಧನೆ ಮತ್ತು ಉದ್ದೇಶಗಳನ್ನು ತಿಳಿಸಿದರು. ಕಲೆಗಳಿಗೆ ನೀಡುವ ಪ್ರಾಶಸ್ತ್ಯ ಫಿಲೋಮಿನಾ ಕಾಲೇಜಿನ ಅನನ್ಯತೆ ಎಂದು ತಿಳಿಸಿದರು.

ಪಟ್ಲ ಫೌಂಡೇಶನ್ ಮಂಗಳೂರು ಮಾತೃ ಘಟಕದ ಸ್ಥಾಪಕಾಧ್ಯಕ್ಷರು ಮತ್ತು ಯಕ್ಷಗಾನದ ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಕಲೆಯ ವಿಸ್ತಾರ ಮತ್ತು ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಆಸಕ್ತಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದು ತಿಳಿಸಿದರು.

ಪ್ರಖ್ಯಾತ ಪುಂಡು ವೇಷಧಾರಿ ಪುತ್ತೂರು ಶ್ರೀಧರ ಭಂಡಾರಿಯವರನ್ನು ನೆನಪಿಸಿ ಯಕ್ಷಗಾನಕ್ಕೆ ಅವರ ಕೊಡುಗೆಯ ಬಗ್ಗೆ ತಿಳಿಸಿದರು. ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೋಂತೆರೋ ಅವರು ಪಟ್ಲ ಸತೀಶ್ ಶೆಟ್ಟಿಯವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. 

ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಪೂರ್ವಾಧ್ಯಕ್ಷರು ಜಯರಾಜ್ ಭಂಡಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. 

ಉಪ ಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್, ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಅಧ್ಯಕ್ಷ ಕರುಣಾಕರ ರೈ ದೇರ್ಲ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿ.ಪಿ. ಅಬ್ದುಲ್ ಕುಂಞಿ ಉಪಸ್ಥಿತರಿದ್ದರು. 

ಯಕ್ಷ ಕಲಾ ಕೇಂದ್ರದ ನಿರ್ದೇಶಕರಾದ ಪ್ರಶಾಂತ್ ರೈ ಸ್ವಾಗತಿಸಿ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ತೇಜಸ್ವಿ ಭಟ್ ವಂದಿಸಿದರು. 

ಸಭಾ ಕಾರ್ಯಕ್ರಮದ ಬಳಿಕ ‘ಸೀತಾ ಪರಿತ್ಯಾಗ ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನಗೊಂಡಿತು. ಕಾಲೇಜಿನ ನಿವೃತ್ತ ಉಪನ್ಯಾಸಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಯಕ್ಷಾಭಿಮಾನಿಗಳು, ಯಕ್ಷಕಲಾ ಕೇಂದ್ರದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article