ಆ.29 ರಂದು ರಾಜ್ಯದ ಎಲ್ಲಾ ಜೈನಮಠಗಳ ಭಟ್ಟಾರಕರುಗಳು ಧರ್ಮಸ್ಥಳ ಭೇಟಿ

ಆ.29 ರಂದು ರಾಜ್ಯದ ಎಲ್ಲಾ ಜೈನಮಠಗಳ ಭಟ್ಟಾರಕರುಗಳು ಧರ್ಮಸ್ಥಳ ಭೇಟಿ

ಉಜಿರೆ: ಕರ್ನಾಟಕದಲ್ಲಿರುವ ಎಲ್ಲಾ ಜೈನಮಠಗಳ ಭಟ್ಟಾರಕರುಗಳು ಆ.29 ರಂದು ಧರ್ಮಸ್ಥಳಕ್ಕೆ ಬಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಶುಭಾಶೀರ್ವಾದ ಮಾಡಿ ಹರಸಲಿದ್ದಾರೆ ಎಂದು ಅಖಿಲ ಭಾರತ ಭಟ್ಟಾರಕ ಜೈನಮಠ ಪರಿಷದ್‌ನ ಅಧ್ಯಕ್ಷರಾದ ಕನಕಗಿರಿ ಜೈನಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಕಾರ್ಯದರ್ಶಿಗಳಾದ ಅರಿಹಂತಗಿರಿ ಜೈನಮಠದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳದ ಬಗ್ಗೆ ಸಮೂಹ ಮಾಧ್ಯಮಗಳಲ್ಲಿ ಆಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಯನ್ನು ಖಂಡಿಸಿ, ಸಮಸ್ತ ಜೈನಸಮಾಜದ ವತಿಯಿಂದ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಂಪೂರ್ಣ ರಕ್ಷಣೆಯ ಭರವಸೆ ನೀಡುವುದೇ ಈ ಭೇಟಿಯ ಉದ್ದೇಶವಾಗಿದೆ.

ಜೈನ್ ಮಿಲನ್ ಸೇರಿದಂತೆ ಜೈನಸಮಾಜದ ಮುಖಂಡರತುಗಳು, ಸೇವಾಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಾ ಅಂದು ಧರ್ಮಸ್ಥಳಕ್ಕೆ ಬಂದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ಉಭಯ ಮಠಗಳ ಭಟ್ಟಾರಕರುಗಳು ಕೋರಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article