ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ನಿಧನ
Wednesday, September 24, 2025
ಬೆಂಗಳೂರು: ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್. ಭೈರಪ್ಪ (94) ಬುಧವಾರ ಅಪರಾಹ್ನ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಂಶ ವೃಕ್ಷ, ನಾಯಿ ನೆರಳು, ಪರ್ವ, ಗೃಹಭಂಗ, ಗ್ರಹಣ, ಉತ್ತರಾಖಂಡ ಸೇರಿದಂತೆ 25 ಕಾದಂಬರಿಗಳನ್ನು ಬರೆದಿರುವ ಭೈರಪ್ಪನವರು, ಪದ್ಮಭೂಷಣ, ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.