ಗೋ ಕಳವುಗೈದು ಹತ್ಯೆ: ಮೂವರ ಬಂಧನ
ಬಂಟ್ವಾಳ: ಮೇಯಲು ಬಿಟ್ಟಿದ್ದ ದನವೊಂದನ್ನು ಕಳವು ಮಾಡಿ ಅಲ್ಲೇ ವಧೆಗೈದು ಮಾಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪೆರ್ನೆ ಗೋಹತ್ಯಾ ಪ್ರಕರಣದಲ್ಲೂ ಇದೇ ಆರೋಪಿಗಳಾಗಿದ್ದಾರೆ ಎಂದು ದ.ಕ. ಜಿಲ್ಲಾ ಪೊಲೀಸರ ಪ್ರಕಟಣೆ ತಿಳಿಸಿದೆ.
ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತ ಆರೋಪಿಗಳಾಗಿದ್ದಾರೆ.
ಆ.14 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಜಾನುವಾರು ಕಳವು ನಡೆದಿದ್ದು, ಹಾಗೂ ಅದರ ಅಂಗಾಗಗಳು ಮರುದಿನ ಸಮೀಪದಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಘಟನೆಗೆ ಸಂಬಂಧಿಸಿದಂತೆ ಸೆ.5 ರಂದು ಮೂವರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆಯ ವೇಳೆ ಗುರುವಾರ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಡಂಬುವಿನಲ್ಲಿ ಗೋವನ್ನು ಕದ್ದು ಅಲ್ಲೇ ವಧೆ ಮಾಡಿರುವ ಪ್ರಕರಣದಲ್ಲೂ ಆರೋಪಿಗಳಾಗಿರುವುದು ತಿಳಿದುಬಂದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.